ADVERTISEMENT

ಪಡೆಯುವ ಶಿಕ್ಷಣದ ಮೇಲೆ ಭವಿಷ್ಯ ನಿಂತಿದೆ: ಮಂಡ್ಯ ಜಿ.ಪಂ ಸಿಇಒ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 5:43 IST
Last Updated 25 ಜನವರಿ 2026, 5:43 IST
ಕೋಲಾರದ ಸಹ್ಯಾದ್ರಿ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಹಾಗೂ ಸಂಸ್ಥೆ ಅಧ್ಯಕ್ಷ ಉದಯಕುಮಾರ್‌ ಸನ್ಮಾನಿಸಿದರು
ಕೋಲಾರದ ಸಹ್ಯಾದ್ರಿ ಕಾಲೇಜಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಹಾಗೂ ಸಂಸ್ಥೆ ಅಧ್ಯಕ್ಷ ಉದಯಕುಮಾರ್‌ ಸನ್ಮಾನಿಸಿದರು   

ಕೋಲಾರ: ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೊಬ್ಬರು ತಿದ್ದಲು ಬರುವುದಿಲ್ಲ. ತಮ್ಮ ಭವಿಷ್ಯವನ್ನು ತಾವೇ ನಿರ್ಮಿಸಿಕೊಳ್ಳಬೇಕು. ಅದು ತಾವು ಪಡೆಯುವ ಶಿಕ್ಷಣದ ಮೇಲೆ ನಿಂತಿದೆ ಎಂದು ಕೋಲಾರದವರೇ ಆದ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.

ಶನಿವಾರ ನಗರದ ಹೊರವಲಯದ ಸಹ್ಯಾದ್ರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಉತ್ತಮ ಆಲೋಚನೆ ಮತ್ತು ಯೋಜನೆ ಮಾಡದೆ ಹೋದರೆ ಮುಂದೆ ಕಷ್ಟದ ದಿನ ಎದುರಾಗುತ್ತವೆ ಎಂದರು.

ಡಿಡಿಪಿಯು ರಾಜಶೇಖರ್ ಪಟ್ಟಣಶೆಟ್ಟಿ ಮಾತನಾಡಿ, ‘ಗುರಿ ಇದ್ದಾಗ ಮಾತ್ರವೇ ಸಾಧನೆ ಮಾಡಲು‌ ಸಾಧ್ಯ. ಬದುಕಿಗೆ ಮಾದರಿಯಾಗುವ ವ್ಯಕ್ತಿಗಳನ್ನು ಆದರ್ಶವಾಗಿ ಇಟ್ಟುಕೊಂಡು ಶಿಕ್ಷಣದ ಕಡೆ ಗಮನ ಕೊಡಿ. ಪೋಷಕರು ಸಾಲ ಮಾಡಿ ತಮ್ಮನ್ನು ಓದಿಸಿದ್ದಾರೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಗಾಯಕ ಅಕ್ಬರ್ ಹಾಡು ಹಾಡಿದರು. ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಉದಯಕುಮಾರ್ ವಹಿಸಿದ್ದರು. ‌ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಕೆ.ನಟರಾಜ್, ಕಾಲೇಜಿನ ಪ್ರಾಂಶುಪಾಲ ಗಂಗಾಪುರ ಜಿ.ವಿ.ವಿನಯ್ ಇದ್ದರು.