ಕೆಜಿಎಫ್: ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಫೆ. 15ರೊಳಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಜಿಲ್ಲಾಧಿಕಾರಿ ಗುರುವಾರ ಆದೇಶಿಸಿದ್ದಾರೆ.
ಚುನಾವಣೆ ನಿಗದಿ ಮಾಡಿದ ದಿನದಿಂದ ಏಳು ದಿನಗಳ ಮುಂಚಿತವಾಗಿ ಸದಸ್ಯರಿಗೆ ನೋಟಿಸ್ ನೀಡಬೇಕು. ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಸಬೇಕು ಎಂದು ತಿಳಿಸಲಾಗಿದೆ.
ರಾಮಸಾಗರ, ಸುಂದರಪಾಳ್ಯ ಮತ್ತು ಎನ್.ಜಿ. ಹುಲ್ಕೂರು ಗ್ರಾಮ ಪಂಚಾಯಿತಿಗಳಿಗೆ ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಟಿ. ಗೊಲ್ಲಹಳ್ಳಿ, ಹುಲ್ಕೂರು ಮತ್ತು ವೆಂಗಸಂದ್ರ ಪಂಚಾಯಿತಿಗಳಿಗೆ ಶಿಶು ಅಭಿವೃದ್ಧಿ ಅಧಿಕಾರಿ, ಘಟ್ಟಮಾದಮಂಗಲ, ಬೇತಮಂಗಲ ಮತ್ತು ಕಮ್ಮಸಂದ್ರ ಪಂಚಾಯಿತಿಗಳಿಗೆ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ, ಕಂಗಾಂಡ್ಲಹಳ್ಳಿ, ಕ್ಯಾಸಂಬಳ್ಳಿ ಮತ್ತು ಘಟ್ಟಕಾಮಧೇನಹಳ್ಳಿ ಪಂಚಾಯಿತಿಗೆ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ, ಪಾರಾಂಡಹಳ್ಳಿ, ಶ್ರೀನಿವಾಸಸಂದ್ರ. ಜಕ್ಕರಸಕುಪ್ಪ ಮತ್ತು ಮಾರುಕುಪ್ಪ ಪಂಚಾಯಿತಿಗೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.