ADVERTISEMENT

ನಂಗಲಿ: ನಿವೃತ್ತ ಎಎಸ್‌ಐಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 2:59 IST
Last Updated 6 ನವೆಂಬರ್ 2020, 2:59 IST
ನಂಗಲಿಯಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಎಎಸ್‌ಐ ಜಿ. ವೆಂಕಟರಾಜು ಅವರಿಗೆ ಬೀಳ್ಕೊಡುಗೆ ನೀಡಲಾಯಿತು
ನಂಗಲಿಯಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಎಎಸ್‌ಐ ಜಿ. ವೆಂಕಟರಾಜು ಅವರಿಗೆ ಬೀಳ್ಕೊಡುಗೆ ನೀಡಲಾಯಿತು   

ನಂಗಲಿ: ಇಲ್ಲಿನ ಪೊಲೀಸ್ ಇಲಾಖೆಯಲ್ಲಿ ಮೂರೂವರೆ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಎಸ್‌ಐ ಜಿ. ವೆಂಕಟರಾಜು ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

ಪೊಲೀಸ್ ಠಾಣಾ ಆವರಣದಲ್ಲಿ ವೆಂಕಟರಾಜು ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಪಿಎಸ್‍ಐ ಎನ್. ಅನಿಲ್‍ಕುಮಾರ್, ‘ವೆಂಕಟರಾಜು ಅವರು ಶಿಸ್ತು, ಸಂಯಮಕ್ಕೆ ಹೆಸರಾಗಿದ್ದರು. ಸಾರ್ವಜನಿಕರೊಂದಿಗೆ ಸಮಾಧಾನದಿಂದ ಮಾತನಾಡುತ್ತಿದ್ದ ಅವರ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿದೆ. ನಿವೃತ್ತಿ ಎಂಬುದು ಅನಿವಾರ್ಯ. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ’ ಎಂದು ಹಾರೈಸಿದರು.

‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಸೇರಿದಂತೆ ದೇಶದ ಭದ್ರತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಹಿರಿದು. ಸಾರ್ವಜನಿಕರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರಿಗೆ ಸಹಕಾರ ನೀಡಬೇಕು’ ಎಂದುಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.