
ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ‘ಗಾಂಧಿ ಗ್ರಾಮ ಪುರಸ್ಕಾರ’
ಮುಳಬಾಗಿಲು: ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಬೈರಕೂರು ಗ್ರಾಮ ಪಂಚಾಯಿತಿಗೆ 2023-24ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ ನೀಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೈರಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕುಮಾರ್ ಹಾಗೂ ಪಿಡಿಒ ಚಂದ್ರಶೇಖರ್ ಅವರಿಗೆ ಪ್ರದಾನ ಮಾಡಿದರು.
ಸ್ವಚ್ಛತೆ, ಕಂದಾಯ ವಸೂಲಿ, ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ, ಕೂಸಿನ ಮನೆ ನಿರ್ವಹಣೆ, ಅಂಗನವಾಡಿ ಕಟ್ಟಡ ಹಾಗೂ ಶೌಚಾಲಯ ಕಟ್ಟಡ ನಿರ್ಮಾಣ, ಕುಡಿವ ನೀರಿನ ವ್ಯವಸ್ಥೆ ಹಾಗೂ ನಿರ್ವಹಣೆ, ಶಾಲೆಗಳಿಗೆ ಕುಡಿವ ನೀರು, ಶೌಚಾಲಯ, ಅಡುಗೆ ಕೋಣೆ, ಶಾಲೆಗಳಿಗೆ ಕಾಂಪೌಂಡ್, ಕಟ್ಟಡಗಳ ದುರಸ್ತಿ, ನರೇಗಾ, ಬೀದಿ ದೀಪ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಸಾಧನೆಗಾಗಿ 2023-24ನೇ ಸಾಲಿನ ಈ ಗ್ರಾಮ ಪಂಚಾಯಿತಿ ಗಾಂಧಿ ಪುರಸ್ಕಾರಕ್ಕೆ ಆಯ್ಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.