ಬಂಗಾರಪೇಟೆ: ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರ ಆರೋಪಿಗಳನ್ನು ಕಾಮಸಮುದ್ರ ಪೊಲೀಸರು ಬಂಧಿಸಿದ್ದು, ₹3ಲಕ್ಷ ಮೌಲ್ಯದ 4ಕೆಜಿ 105ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲ್ಲೂಕಿನ ಕೃಷ್ಣಪ್ಪ, ಬಂಗಾರಪೇಟೆ ತಾಲ್ಲೂಕಿನ ಲಕ್ಷ್ಮಿ ನಾರಾಯಣ ಬಂಧಿತರು.
ಇವರಿಬ್ಬರೂ ಕಾಮಸಮುದ್ರ ಹೋಬಳಿ ವ್ಯಾಪ್ತಿಯ ಮುಷ್ಟ್ರಹಳ್ಳಿ ಡ್ಯಾಂ ಸಮೀಪದ ಸರ್ಕಾರಿ ಅರಣ್ಯ ಪ್ರದೇಶದ ಒಂದು ಮರದ ಕೆಳಗೆ ಗಾಂಜಾ ಇಟ್ಟುಕೊಂಡು ಕುಳಿತಿದ್ದರು. ಕಾಮಸಮುದ್ರ ಸಿಪಿಐ ನಾರಾಯಣಸ್ವಾಮಿ ನೇತೃತ್ವದಲ್ಲಿ ಪಿಎಸ್ಐ ಬಿ.ವಿ.ಕಿರಣ್ ಕುಮಾರ್, ಎಎಸ್ಐ ಶ್ರೀನಿವಾಸ್ ಹಾಗೂ ಸಿಬ್ಬಂದಿ ಕೃಷ್ಣ, ರಾಮರಾವ್, ಮಂಜುನಾಥ, ಲಕ್ಷ್ಮಣ್ತೇಲಿ, ಹರೀಶ್ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಿದ್ದಾರೆ. ಎಸ್.ಪಿ ಶಾಂತರಾಜು, ಡಿವೈಎಸ್ಪಿ ವಿ.ಎಲ್.ರಮೇಶ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.