ADVERTISEMENT

ಸರ್ಕಾರದ ಅಮಾನವೀಯ ನಡೆ: ರಮೇಶ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 15:19 IST
Last Updated 3 ಜುಲೈ 2020, 15:19 IST
ಕೆ.ರಮೇಶ್‌ ಕುಮಾರ್
ಕೆ.ರಮೇಶ್‌ ಕುಮಾರ್   

ಕೋಲಾರ: ‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ’ ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ಕಾರಕ್ಕೆ ತಿಳಿವಳಿಕೆ ಕೊರತೆಯಿದೆ. ಸೋಂಕಿತರ ಅಂತ್ಯಕ್ರಿಯೆ ವಿಚಾರದಲ್ಲಿ ಬೇಜವಾಬ್ದಾರಿ ತೋರುತ್ತಿದೆ. ಈ ಬೇಜವಾಬ್ದಾರಿ ನಡೆಯಿಂದ ಜನರಲ್ಲಿ ಜಾಗೃತಿ ಬದಲಿಗೆ ಹೆದರಿಕೆ ಬಂದಿದೆ. ಕೊರೊನಾ ವಾರಿಯರ್ಸ್ ಸಹ ಆತಂಕಗೊಂಡಿದ್ದಾರೆ. ಬಂಧು ಬಳಗ, ರಕ್ತ ಸಂಬಂಧ, ಮಾನವೀಯತೆ ಸತ್ತು ಹೋಗಿದೆ’ ಎಂದು ಮಾರ್ಮಿಕವಾಗಿ ನುಡಿದರು.

‘ಆರೋಗ್ಯ ಇಲಾಖೆ ಸಿಬ್ಬಂದಿಯು ಕಾಯಿಲೆಗಿಂತ ಹೆಚ್ಚಾಗಿ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. ಸೋಂಕಿತರ ಸಾವು ಸಂಭವಿಸಿದಾಗ ವ್ಯವಸ್ಥಿತವಾಗಿ ಅಂತ್ಯಕ್ರಿಯೆ ನಡೆಸಬೇಕು. 15 ಅಡಿ ಆಳದ ಗುಂಡಿ ತೆಗೆದು ಗೌರವಯುತವಾಗಿ ಅಂತ್ಯಕ್ರಿಯೆ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಸಚಿವರ ಅಥವಾ ಜನಪ್ರತಿನಿಧಿಗಳ ರಕ್ತ ಸಂಬಂಧಿಗಳಲ್ಲಿ ಯಾರಾದರೂ ಕೊರೊನಾ ಸೋಂಕಿನಿಂದ ಮೃತಪಟ್ಟರೆ ಸರ್ಕಾರ ಹೀಗೆ ನಡೆದುಕೊಳ್ಳುತ್ತದೆಯೇ? ತಾನು ಮಂತ್ರಿ, ಸರ್ಕಾರವೆಂಬ ಅಹಂ ಬಿಡಬೇಕು. ಅಧಿಕಾರ ಶಾಶ್ವತವಲ್ಲ, ಮಾನವೀಯತೆ ಶಾಶ್ವತ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.