ADVERTISEMENT

ಶಿಕ್ಷಕರ ಸಂಘದಿಂದ ಧನ ಸಹಾಯ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 4:56 IST
Last Updated 1 ಜುಲೈ 2021, 4:56 IST
ಮಾಲೂರು ಪಟ್ಟಣದ ಶಿಕ್ಷಕರ ಕಚೇರಿ ಸಭಾಂಗಣದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ತುತ್ತಾಗಿರುವ ಸಿದ್ದನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕ ರಮೇಶ್ ಅವರ ಕುಟುಂಬಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ₹ 25 ಸಾವಿರ ಚೆಕ್ ಅನ್ನು ಬಿಇಒ ಕೃಷ್ಣಮೂರ್ತಿ ವಿತರಿಸಿದರು
ಮಾಲೂರು ಪಟ್ಟಣದ ಶಿಕ್ಷಕರ ಕಚೇರಿ ಸಭಾಂಗಣದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ತುತ್ತಾಗಿರುವ ಸಿದ್ದನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕ ರಮೇಶ್ ಅವರ ಕುಟುಂಬಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ₹ 25 ಸಾವಿರ ಚೆಕ್ ಅನ್ನು ಬಿಇಒ ಕೃಷ್ಣಮೂರ್ತಿ ವಿತರಿಸಿದರು   

ಮಾಲೂರು: ಪಟ್ಟಣದ ಶಿಕ್ಷಕರ ಕಚೇರಿ ಸಭಾಂಗಣದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ತುತ್ತಾಗಿರುವ ಸಿದ್ದನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕ ರಮೇಶ್ ಅವರ ಕುಟುಂಬಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ₹ 25 ಸಾವಿರ ಚೆಕ್ ಅನ್ನು ಬಿಇಒ ಕೃಷ್ಣಮೂರ್ತಿ ವಿತರಿಸಿದರು.

ಕೋವಿಡ್ ಸೋಂಕಿಗೆ ತುತ್ತಾಗಿರುವ ಶಿಕ್ಷಕ ರಮೇಶ್ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಹೆಚ್ಚು ಹಣದ ಅಗತ್ಯವಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನೆರವು ನೀಡಲಾಗುತ್ತಿದೆ ಎಂದು ಬಿಇಒ ಕೃಷ್ಣಮೂರ್ತಿ ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಆರ್. ನರಸಿಂಹ, ಪ್ರಧಾನ ಕಾರ್ಯದರ್ಶಿ ಮುನಿರಾಜು, ಭಗತ್ ಸಿಂಗ್, ವೆಂಕಟೇಶ್, ರಮೇಶ್, ಮುನಿರಾಜು, ಚಿನ್ನಪ್ಪ, ಚಂದ್ರಮ್ಮ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.