ಕೆಜಿಎಫ್: ತಾಲ್ಲೂಕಿನ ಐದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆಯಿತು.
ರಾಮಸಾಗರ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಲಕ್ಷ್ಮಮ್ಮ ಚುನಾಯಿತರಾದರು. ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಪವಿತ್ರಾ ಮತ್ತು ಉಪಾಧ್ಯಕ್ಷರಾಗಿ ಎಂ. ರಾಮಪ್ಪ ಆಯ್ಕೆಯಾದರು.
ಘಟ್ಟಕಾಮಧೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್. ಸುರೇಶ್ ಬಾಬು ಮತ್ತು ಉಪಾಧ್ಯಕ್ಷೆಯಾಗಿ ಜಿ. ಭಾಗ್ಯಾ ಚುನಾಯಿತರಾದರು. ಪಾರಾಂಡಹಳ್ಳಿ ಗ್ರಾಮ ಪಂಚಾಯಿತಿಗೆ ಎಸ್.ಆರ್. ತುಳಸಮ್ಮ ಅಧ್ಯಕ್ಷೆಯಾದರೆ, ಎಂ. ಅರುಣ್ಕುಮಾರ್ ಉಪಾಧ್ಯಕ್ಷರಾದರು.
ಕಮ್ಮಸಂದ್ರ ಗ್ರಾಮ ಪಂಚಾಯಿತಿಗೆ ಬಿ. ಸುರೇಶ್ ಅಧ್ಯಕ್ಷರಾಗಿ ಮತ್ತು ದಾಮೋದರ ರೆಡ್ಡಿ ಉಪಾಧ್ಯಕ್ಷರಾಗಿ ಚುನಾಯಿತರಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.