ADVERTISEMENT

ಬಂದೂಕು ತರಬೇತಿ ಶಿಬಿರ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 6:16 IST
Last Updated 1 ಏಪ್ರಿಲ್ 2022, 6:16 IST
ಬೇತಮಂಗಲ ಸಮೀಪದ ಬಂಗಾರು ತಿರುಪತಿ ದೇವಾಲಯ
ಬೇತಮಂಗಲ ಸಮೀಪದ ಬಂಗಾರು ತಿರುಪತಿ ದೇವಾಲಯ   

ಕೆಜಿಎಫ್‌: ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳ ನಾಗರಿಕ ಬಂದೂಕು ತರಬೇತಿ ಕಾರ್ಯಕ್ರಮವನ್ನು ಏಪ್ರಿಲ್‌ 18 ರಿಂದ 24 ವರೆಗೆಏರ್ಪಡಿಸಲಾಗಿದೆ.

ಕೆಜಿಎಫ್‌ ಪೊಲೀಸ್ ವತಿಯಿಂದ ಚಾಂಪಿಯನ್‌ ರೀಫ್ಸ್‌ ಡಿಎಆರ್ ಬಳಿ ತರಬೇತಿ ನಡೆಯಲಿದೆ. ತರಬೇತಿ ಪಡೆಯಲು ಇಚ್ಛಿಸುವವರು ಉತ್ತಮ ಗುಣ ನಡತೆ ಪ್ರಮಾಣ ಪತ್ರವನ್ನು ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಪಡೆದು ಅರ್ಜಿ ಸಲ್ಲಿಸಬೇಕು.

ಡಿಎಆರ್ ಕಚೇರಿಯಲ್ಲಿಅರ್ಜಿ ವಿತರಣೆ ಮಾಡಲಾಗುತ್ತಿದೆ. ನಾಗರಿಕರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಣಿದೇವಿ ಮಾಲಗತ್ತಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.