ADVERTISEMENT

ಅಕ್ರಮ ಕಲ್ಲು ಗಣಿಗಾರಿಕೆ: ಭೂ ವಿಜ್ಞಾನ ಇಲಾಖೆ ಅಧಿಕಾರಿ ಸೇರಿ ಹಲವರಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:19 IST
Last Updated 24 ಸೆಪ್ಟೆಂಬರ್ 2020, 14:19 IST
ಮಾಲೂರು ತಾಲ್ಲೂಕಿನ ನಿದರ ಮಂಗಲ ಕಂದಾಯ ವೃತ್ತದ ಸರ್ವೆ ನಂ.1 ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಾಣಿಗಾರಿಕೆ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿ ಪರಿಶೀಲಿಸಿದರು
ಮಾಲೂರು ತಾಲ್ಲೂಕಿನ ನಿದರ ಮಂಗಲ ಕಂದಾಯ ವೃತ್ತದ ಸರ್ವೆ ನಂ.1 ರ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಾಣಿಗಾರಿಕೆ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿ ಪರಿಶೀಲಿಸಿದರು   

ಮಾಲೂರು: ಅಕ್ರಮ ಕಲ್ಲು ಗಣಿಗಾರಿಕೆಯ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ತಹಶೀಲ್ದಾರ್‌ ಸೇರಿ ಕಂದಾಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮ ‌ನೋಟಿಸ್ ನೀಡಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ಈಚೆಗೆ ರಾತ್ರಿ ವೇಳೆ ತಾಲ್ಲೂಕಿನ ನಿದರ ಮಂಗಲ ಕಂದಾಯ ವೃತ್ತದ ಸುದ್ದುಗುಂಟೆ ಬೇಚರ್ ಗ್ರಾಮದ ಸರ್ವೆ ನಂ–1 ರ ಸರ್ಕಾರಿ ಜಮೀನಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಅಕ್ರಮ ಕಲ್ಲು ಗಾಣಿಗಾರಿಕೆ ಪತ್ತೆ ಹಚ್ಚಿದ್ದರು.

ಸ್ಥಳದಲ್ಲಿ ಕಲ್ಲು ಕೆಲಸ ಮಾಡುತ್ತಿದ್ದ ಕ್ರೇನ್ ವಶಪಡಿಸಿಕೊಂಡು ಮಾಲೀಕ ಹಾಗೂ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವ್ಯಕ್ತಿಗಳ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಮಾಹಿತಿ ನೀಡದ ಮತ್ತು ಕ್ರಮ ಕೈಗೊಳ್ಳದ ಕಾರಣಕ್ಕೆ ಹಿರಿಯ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಷಣ್ಮುಖ, ತಹಶೀಲ್ದಾರ್‌ ಮಂಜುನಾಥ, ಕಂದಾಯ ಅಧಿಕಾರಿ ಮುನಿಸ್ವಾಮಿ ಶೆಟ್ಟಿ, ಗ್ರಾಮ ಲೆಕ್ಕಿಗ ಗುರುದತ್‌ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.