ADVERTISEMENT

ಪೈಪ್‍ಲೈನ್ ಅಳವಡಿಕೆ: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 27 ಮೇ 2019, 13:11 IST
Last Updated 27 ಮೇ 2019, 13:11 IST

ಕೋಲಾರ: ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ವಿಚಾರದಲ್ಲಿ ತಾಲ್ಲೂಕಿನ ಚಾಮರಹಳ್ಳಿಯಲ್ಲಿ ಸೋಮವಾರ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ.

ಗ್ರಾಮದ ಸೀನಪ್ಪ ಹಾಗೂ ರಾಮಪ್ಪ ಕುಟುಂಬದವರ ನಡುವೆ ಗಲಾಟೆಯಾಗಿದ್ದು, ರಾಮಪ್ಪ ಮತ್ತು ಗಂಗಪ್ಪ ಮತ್ತೊಂದು ಕುಟುಂಬದ ಸೀನಪ್ಪ (55) ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ್ದಾರೆ.

ಸೀನಪ್ಪನ ಮಗ ಗಂಗಪ್ಪ (35)ಗೆ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ್ದಾನೆ. ಮಾರಣಾಂತಿಕ ಹಲ್ಲೆ ನಡೆಸಿ ರಾಮಪ್ಪ ಮತ್ತು ಮಕ್ಕಳು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿರುವ ಸೀನಪ್ಪ, ಗಂಗಪ್ಪ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.