ADVERTISEMENT

ಗ್ರಾಮಾಭಿವೃದ್ಧಿಗೆ ಒತ್ತು ನೀಡಲು ಸೂಚನೆ

ಕೆಜಿಎಫ್‌ ತಾಲ್ಲೂಕಿನ ಗ್ರಾ.ಪಂ.ಗಳಿಗೆ ರೂಪಕಲಾ ಭೇಟಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 7:20 IST
Last Updated 8 ಜನವರಿ 2021, 7:20 IST
ಶಾಸಕಿ ಎಂ. ರೂಪಕಲಾ ಬುಧವಾರ ಕೆಜಿಎಫ್ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರಗಳಿಗೆ ತೆರಳಿ ನೂತನ ಸದಸ್ಯರನ್ನು ಭೇಟಿ ಮಾಡಿ ಮಾತನಾಡಿದರು
ಶಾಸಕಿ ಎಂ. ರೂಪಕಲಾ ಬುಧವಾರ ಕೆಜಿಎಫ್ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರಗಳಿಗೆ ತೆರಳಿ ನೂತನ ಸದಸ್ಯರನ್ನು ಭೇಟಿ ಮಾಡಿ ಮಾತನಾಡಿದರು   

ಕೆಜಿಎಫ್‌: ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕಿ ಎಂ. ರೂಪಕಲಾ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ರಾಮಸಾಗರ, ವೆಂಗಸಂದ್ರ, ಎನ್‌.ಜಿ. ಹುಲ್ಕೂರು, ಮಾರಿಕುಪ್ಪ, ಜಕ್ಕರಸನಕುಪ್ಪ, ಹುಲ್ಕೂರು, ಕಮ್ಮಸಂದ್ರ ಮತ್ತು ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿಗಳಿಗೆ ಸೇರಿದ ನೂತನ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.

ಅಭಿವೃದ್ಧಿಯನ್ನು ಮನಸ್ಸಿನಲ್ಲಿಟ್ಟು ಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಕೋರಿದರು.

ADVERTISEMENT

ಪಂಚಾಯಿತಿ ಚುನಾವಣೆಯಲ್ಲಿ ಕೂಡ ಗ್ರಾಮೀಣ ಜನತೆ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಚಲಾವಣೆ ಮಾಡಿದ್ದಾರೆ. ಅವರ ಆಶಯಕ್ಕೆ ತಕ್ಕಂತೆ ಆಡಳಿತ ನಡೆಸಬೇಕಾಗಿದೆ ಎಂದರು.

ಮುಖಂಡರಾದ ಪದ್ಮನಾಭ ರೆಡ್ಡಿ, ನಾರಾಯಣರೆಡ್ಡಿ, ನಾಗರಾಜ್‌, ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.