ADVERTISEMENT

ಜೆಡಿಎಸ್‌ ಸಭೆ ನಾಳೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2023, 6:29 IST
Last Updated 15 ಜನವರಿ 2023, 6:29 IST

ಕೋಲಾರ: ತಾಲ್ಲೂಕು ಜೆಡಿಎಸ್‌ ಪಕ್ಷದಿಂದ ಜ. 16ರಂದು ಮಧ್ಯಾಹ್ನ 2ಗಂಟೆಗೆ ನಗರದಲ್ಲಿ ರೈತ ಸಂಕ್ರಾಂತಿ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ.

ನಗರದ ಕ್ಲಾಕ್‌ ಟವರ್‌ ಕುತುಬ್ ಮಹಲ್ ದರ್ಗಾದಲ್ಲಿ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ನಗರ ಹೊರವಲಯದ ಸಿಎಂಆರ್ ಮಂಡಿ ಬಳಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ.

ಜೆಡಿಎಸ್‌ ರಾಜ್ಯ ಘಟಲದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜಿಲ್ಲಾ ಅಧ್ಯಕ್ಷ ಜಿ.ಕೆ. ವೆಂಕಟಾಶಿವಾರೆಡ್ಡಿ, ವಿಧಾನ ಪರಿಷತ್‌ ಸದಸ್ಯ ಇಂಚರ ಗೋವಿಂದರಾಜು, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳು, ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ತಿಳಿಸಿದ್ದಾರೆ.

ADVERTISEMENT

ಸಂಜೆ 4 ಗಂಟೆಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವರ್ಚುವಲ್‌ ವೇದಿಕೆ ಮೂಲಕ ಸಂಕ್ರಾಂತಿ ಶುಭಾಶಯ ಕೋರಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.