ಕೆಜಿಎಫ್: ಸಂಸಾರದಲ್ಲಿ ಮೂಡಿದ ವಿರಸದಿಂದಾಗಿ ಗಂಡನಿಂದ ಕಿರುಕುಳ ಅನುಭವಿಸುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಪ್ರಕರಣ ಊರಿಗಾಂಪೇಟೆಯಲ್ಲಿ ನಡೆದಿದೆ.
ಊರಿಗಾಂಪೇಟೆಯ ಗಂಡನ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ತೀವ್ರ ಸುಟ್ಟ ಗಾಯಗಳಿಗೆ ಒಳಗಾದ ಶೈಲಜ (24) ಅವರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಸೇರಿಸಲಾಗಿದೆ.
ಗಾಯಾಳು ನಗರದ ವ್ಯಾಪಾರಿ ಲೋಗನಾಥನ್ ಎಂಬುವರನ್ನು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು. ಅಂದಿನಿಂದಲೂ ಮನೆಯಲ್ಲಿ ಗಂಡ ಮತ್ತು ಅತ್ತೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳ ಮುಂದೆ ನೀಡಿದ ಹೇಳಿಕೆಗೆ ಅನುಗುಣವಾಗಿ ರಾಬರ್ಟಸನ್ಪೇಟೆ ಪೊಲೀಸರು ಶನಿವಾರ ಪ್ರಕರಣ ದಾಖಲು ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.