ADVERTISEMENT

ಮನೆಯಲ್ಲಿ ಚಿನ್ನಾಭರಣ–ನಗದು ಕಳವು

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 15:47 IST
Last Updated 31 ಡಿಸೆಂಬರ್ 2021, 15:47 IST
ವೇಮಗಲ್ ನಿವಾಸಿ ವಿ.ಎಂ.ನಾಗರಾಜ್ ಅವರ ಮನೆಗೆ ನುಗ್ಗಿದ ಕಳ್ಳರು ಅಲ್ಮೇರಾದಲ್ಲಿದ್ದ ಚಿನ್ನಾಭರಣದ ಪೆಟ್ಟಿಗೆಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು
ವೇಮಗಲ್ ನಿವಾಸಿ ವಿ.ಎಂ.ನಾಗರಾಜ್ ಅವರ ಮನೆಗೆ ನುಗ್ಗಿದ ಕಳ್ಳರು ಅಲ್ಮೇರಾದಲ್ಲಿದ್ದ ಚಿನ್ನಾಭರಣದ ಪೆಟ್ಟಿಗೆಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು   

ವೇಮಗಲ್: ಗ್ರಾಮದ ನಿವಾಸಿ ವಿ.ಎಂ.ನಾಗರಾಜ್ ಅವರ ಮನೆಯಲ್ಲಿ ಕಳ್ಳರು ಗುರುವಾರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ₹ 3 ಲಕ್ಷ ಕಳವು ಮಾಡಿದ್ದಾರೆ.

ನಾಗರಾಜ್‌ ಅವರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸದಸ್ಯರೊಂದಿಗೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಈ ದುಷ್ಕೃತ್ಯ ಎಸಗಿದ್ದಾರೆ. ಮನೆಯ ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಅಲ್ಮೇರಾದಲ್ಲಿದ್ದ ಹಣ ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯೊಂದಿಗೆ ಹೊಲಕ್ಕೆ ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಚಿನ್ನದ ಸರಗಳು, ಉಂಗುರಗಳು, ಕಿವಿಯೋಲೆಗಳು ಮತ್ತು ಹೊಸ ಮನೆ ಕಟ್ಟಿಸಲು ಕೂಡಿಟ್ಟಿದ್ದ ಹಣ ಕಳವಾಗಿದೆ ಎಂದು ನಾಗರಾಜ್‌ ಹೇಳಿಕೆ ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವೇಮಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.