ಬೇತಮಂಗಲ: ಕೆಜಿಎಫ್ ಕ್ಷೇತ್ರದಲ್ಲಿ ಎಲ್ಲಾ ವಿದ್ಯಾವಂತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೆ. 26ರಂದು ಬೆಳಿಗ್ಗೆ 9ಕ್ಕೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವಿ. ಮೋಹನ್ ಕೃಷ್ಣ ತಿಳಿಸಿದರು.
‘ಕೆಜಿಎಫ್ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ, ಐಟಿಐ, ಎಂಜಿನಿಯರಿಂಗ್ ಸೇರಿ ಮತ್ತಿತರ ವಿದ್ಯಾಭ್ಯಾಸ ಮಾಡಿರುವ ವಿದ್ಯಾವಂತ ಯುವಕ, ಯುವತಿಯರು ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಅವರಿಗೆ ನೆರವಾಗಲು ವಿವಿಧ ಕಂಪನಿಗಳ ಆಶ್ರಯದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದ್ದೇವೆ.ಕೊರೊನಾ ಕಾರಣ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಅಂತಹವರಿಗೆ ಉದ್ಯೋಗ ಮೇಳ ದಾರಿದೀಪವಾಗಲಿದೆ’ ಎಂದರು.
ಮೇಳ ಕೆಜಿಎಫ್ನ ಕೊರಮಂಡಲದಲ್ಲಿರುವ ಸ್ಕೂಲ್ ಆಫ್ ಮೈನ್ಸ್ನಲ್ಲಿ ನಡೆಯಲಿದೆ. ಮಾಹಿತಿಗೆ 9739132059ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.