ADVERTISEMENT

ಕಾಂಗ್ರೆಸ್‌ಗೆ ಸೇರ್ಪಡೆ: ಇನ್ನೂ ನಿರ್ಧಾರ ಮಾಡಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 2:08 IST
Last Updated 20 ನವೆಂಬರ್ 2020, 2:08 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಕೋಲಾರ: ‘ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್‌ ಮತ್ತು ನಾವು ಕುಟುಂಬ ಸ್ನೇಹಿತರು. ತಂದೆ ಮುಖ್ಯಮಂತ್ರಿಯಾಗಿದ್ದಾಗ ಶಿವಕುಮಾರ್ ಅವರ ಜತೆಯಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

‘ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಬಸವರಾಜ ಹೊರಟ್ಟಿ, ಎಚ್‌.ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ಅಧಿಕಾರ ಕೊಟ್ಟಿದ್ದರೆ ವಿಶ್ವನಾಥ್‌ ಜೆಡಿಎಸ್‌ನಲ್ಲೇ ಉಳಿಯುತ್ತಿದ್ದರು’ ಎಂದರು.

‘ನಾನು ಮಾತ್ರವಲ್ಲ, ಇಡೀ ಪಕ್ಷ ಸುಮ್ಮನೆ ಕುಳಿತಿದೆ. ವಿಪಕ್ಷದವರು ದುರ್ಬಲವಾಗಿರುವುದರಿಂದ ಬಿಜೆಪಿ ಬಲವಾಗಿದೆ.’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.