ADVERTISEMENT

ಕೋಲಾರದಲ್ಲಿ ಸಿದ್ದರಾಮಯ್ಯಗೆ ಮೂರನೇ ಸ್ಥಾನ: ಇಬ್ರಾಹಿಂ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 21:07 IST
Last Updated 5 ಮಾರ್ಚ್ 2023, 21:07 IST
ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ   

ಕೋಲಾರ: ‘ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರಿಗೆ ಮೂರನೇ ಸ್ಥಾನವೇ ಗತಿ. ದಯವಿಟ್ಟು ಇಲ್ಲಿ ಅವರು ಸ್ಪರ್ಧಿಸಬಾರದು. ತಾನು ಸೋಲುತ್ತಿರುವ ಶಾಸಕ ರಮೇಶ್‌ ಕುಮಾರ್‌ ಅವರು ಸಿದ್ದರಾಮಯ್ಯ ಅವರೂ ಸೋಲಲಿ ಎಂದು ಇಲ್ಲಿಗೆ ಕರೆತಂದಿದ್ದಾರೆ’ ಎಂದು ಜೆಡಿಎಸ್‌ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದರು. ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ದೇವೇಗೌಡ ಅವರ ಜೀವನಚರಿತ್ರೆ, ಪ್ರಾಮಾಣಿಕತೆ ಗಮನಿಸಿ. ಈ ದೇಶದ ಪ್ರಧಾನಿ ಆಗಿದ್ದ ಅವರಿಗೆ ಒಂದು ಸ್ವಂತ ಮನೆ ಇಲ್ಲ. ನಾಲ್ಕು ಜುಬ್ಬಾ, ನಾಲ್ಕು ಪಂಚೆ ಇಲ್ಲ. ಆದರೆ, ಇವತ್ತು ಶಾಸಕನ ಮಗನ ಮನೆಯಲ್ಲಿ ₹8 ಕೋಟಿ ಸಿಗುತ್ತಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು’ ಎಂದರು.

ನಾಟಕ ಪ್ರದರ್ಶನಕ್ಕೆ ಅವಕಾಶ ಬೇಡ: ಮಾರ್ಚ್‌ 7ರಂದು ಕೋಲಾರದಲ್ಲಿ ರಂಗಾಯಣ ಮೈಸೂರು ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ನಿರ್ದೇಶನದ ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.