ADVERTISEMENT

ಕೇರಳ ಲಾಟರಿ ವಶ: ಇಬ್ಬರ ಸೆರೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 6:43 IST
Last Updated 1 ಏಪ್ರಿಲ್ 2022, 6:43 IST

ಕೆಜಿಎಫ್‌: ಕೇರಳ ರಾಜ್ಯದ ಲಾಟರಿ ಟಿಕೆಟ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆಂಡರಸನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.

ಭಾರತೀಪುರಂ ನಿವಾಸಿ ಕರುಣಾಕರನ್‌ ಮತ್ತು ಮಾರಿಕುಪ್ಪಂನ ದಕ್ಷಿಣಾ ಮೂರ್ತಿ ಬಂಧಿತರು.

ಕೇರಳ ರಾಜ್ಯದ ಲಾಟರಿಯನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಆಂಡರಸನ್‌ಪೇಟೆ ಸಬ್‌ ಇನ್‌ಸ್ಪೆಕ್ಟರ್ ರಾಜೇಶ್ವರಿ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ. ಅವರಿಂದ ₹ 65,000 ಮೌಲ್ಯದ 1,500 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.