ADVERTISEMENT

ಸಮೀಕ್ಷೆಗೆ ತಾಂತ್ರಿಕ ತೊಂದರೆ ತಾಲ್ಲೂಕು ಕಚೇರಿಗೆ ಬಂದ ಶಿಕ್ಷಕರು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 7:06 IST
Last Updated 25 ಸೆಪ್ಟೆಂಬರ್ 2025, 7:06 IST
ಕೆಜಿಎಫ್‌ ತಾಲ್ಲೂಕು ಆಡಳಿತ ಸೌಧದಲ್ಲಿ ಸಮೀಕ್ಷೆಗೆ ನೇಮಕವಾಗಿದ್ದ ಶಿಕ್ಷಕರು ಬುಧವಾರ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್ ಅವರಿಗೆ ಒತ್ತಾಯಿಸಿದರು
ಕೆಜಿಎಫ್‌ ತಾಲ್ಲೂಕು ಆಡಳಿತ ಸೌಧದಲ್ಲಿ ಸಮೀಕ್ಷೆಗೆ ನೇಮಕವಾಗಿದ್ದ ಶಿಕ್ಷಕರು ಬುಧವಾರ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್ ಅವರಿಗೆ ಒತ್ತಾಯಿಸಿದರು   

ಕೆಜಿಎಫ್‌: ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ವೇಳೆ ತಾಂತ್ರಿಕ ಅಡಚಣೆ ಎದುರಾಗಿದ್ದು, ಸಮೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹತ್ತಾರು ಶಿಕ್ಷಕರು ತಾಲ್ಲೂಕು ಕಚೇರಿಗೆ ಬಂದು, ತಾಂತ್ರಿಕ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು. 

ಶಿಕ್ಷಕರು ಅಳವಡಿಸಿಕೊಂಡ ಆ್ಯಪ್ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಎಲ್ಲ ಸರಿಯಿದ್ದರೆ ಕೇವಲ ಹದಿನೈದು ನಿಮಿಷದಲ್ಲಿ ಒಂದು ಮನೆಯ ಸಂಪೂರ್ಣ ಸಮೀಕ್ಷೆ ಮಾಡಬಹುದು. ಆದರೆ, ಆ್ಯಪ್‌ನಲ್ಲಿ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ನಗರದ ಸ್ವರ್ಣ ನಗರ ಬಡಾವಣೆಯಲ್ಲಿ ನಿಯೋಜನೆಗೊಂಡ ಶಿಕ್ಷಕರ ತಂಡಕ್ಕೆ ಮ್ಯಾಪ್‌ನಲ್ಲಿ ಆಂಧ್ರಪ್ರದೇಶದ ಗಡಿ ತೋರಿಸುತ್ತಿದೆ. ಇದೇ ರೀತಿಯ ಸಮಸ್ಯೆಗಳನ್ನು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರು ಎದುರಿಸುತ್ತಿದ್ದಾರೆ. ಕೂಡಲೇ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶಿಕ್ಷಕರು, ತಹಶೀಲ್ದಾರ್ ಮತ್ತು ಸಮಾಜ ಕಲ್ಯಾಣ ಇಲಾಖೆ ನೋಡಲ್ ಅಧಿಕಾರಿಗಳನ್ನು ಒತ್ತಾಯಿಸಿದರು. 

ಮೊಬೈಲ್‌ ಆ್ಯಪ್‌ನಲ್ಲಿನ ಸಮಸ್ಯೆಯನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುತ್ತಿದ್ದ ಶಿಕ್ಷಕರು ಮಧ್ಯಾಹ್ನವಾದರೂ ಸಮೀಕ್ಷೆಗೆ ಹೋಗಲೇ ಇಲ್ಲ.

ADVERTISEMENT

ಸಮಸ್ಯೆ ನಮ್ಮಲ್ಲಿ ಆಗಿಲ್ಲ. ಕೇಂದ್ರ ಕಚೇರಿಯಿಂದಲೇ ಸಮಸ್ಯೆ ಉಂಟಾಗಿದೆ. ಅದನ್ನು ನಿವಾರಿಸಲು ಯತ್ನಿಸಲಾಗುತ್ತಿದೆ ಎಂದು ತಹಶೀಲ್ದಾರ್‌ ಭರತ್‌ ಶಿಕ್ಷಕರಿಗೆ ಭರವಸೆ ನೀಡಿದರು.

ಮಧ್ಯಾಹ್ನದ ನಂತರ ಆಪ್‌ ಕೆಲಸ ಮಾಡಿದೆ. ಪ್ರಗತಿಯನ್ನು ಸಾಧಿಸಲಾಗುತ್ತಿದೆ ಎಂದು ತಹಶೀಲ್ದಾರ್‌ ಎಚ್‌.ಜೆ.ಭರತ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.