ADVERTISEMENT

ಸಾರಿಗೆ ಮುಷ್ಕರ | ಕೋಲಾರದಲ್ಲಿ KSRTC ಬಸ್ಸಿಗೆ ಕಲ್ಲೇಟು; ಕಿಟಕಿ ಗಾಜು ಪುಡಿಪುಡಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 6:48 IST
Last Updated 5 ಆಗಸ್ಟ್ 2025, 6:48 IST
   

ಕೋಲಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದ ವೇಳೆ ಕಿಡಿಗೇಡಿಗಳು ಬಸ್ಸಿನ ಮೇಲೆ ಕಲ್ಲೆಸೆದಿದ್ದಾರೆ.

ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಕಿಟಕಿ ಗಾಜು ಪುಡಿಪುಡಿಯಾಗಿದೆ.

ಬೆಳಿಗ್ಗೆಯಿಂದಲೇ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಸಾರಿಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ADVERTISEMENT

ಜಿಲ್ಲಾ ಪೊಲೀಸರು ಸ್ಥಳಕ್ಕೆ ಬಂದು ಬಂದೋಬಸ್ತ್ ಕಲ್ಪಿಸಿದ್ದಾರೆ.‌ ಖಾಸಗಿ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತಿವೆ. ಆದಾಗ್ಯೂ ಶಾಲಾ‌ಕಾಲೇಜು ವಿದ್ಯಾರ್ಥಿಗಳು, ನೌಕರರು, ವ್ಯಾಪಾರಿಗಳು ಸರಿಯಾದ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.