ADVERTISEMENT

ಕೋಲಾರ ನೂತನ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 16:42 IST
Last Updated 14 ಫೆಬ್ರುವರಿ 2021, 16:42 IST
ಕೋಲಾರದಲ್ಲಿ ಭಾನುವಾರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಆರ್.ಸೆಲ್ವಮಣಿ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಶುಭ ಕೋರಿದರು.
ಕೋಲಾರದಲ್ಲಿ ಭಾನುವಾರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಆರ್.ಸೆಲ್ವಮಣಿ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಶುಭ ಕೋರಿದರು.   

ಕೋಲಾರ: ನೂತನ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಅವರು ಇಲ್ಲಿ ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಸೆಲ್ವಮಣಿ ಅವರಿಗೆ ಕಾರ್ಯಾಭಾರ ಹಸ್ತಾಂತರಿಸಿ ಶುಭ ಕೋರಿದರು.

ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿ ಸೆಲ್ವಮಣಿ, ‘ಜಿಲ್ಲೆಯ ಜಲ ಮೂಲಗಳ ಪುನಶ್ವೇತನ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೋಲಾರದಂತಹ ಉತ್ತಮ ಜಿಲ್ಲೆಯಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಸಂತಸವಾಗಿದೆ’ ಎಂದರು.

‘ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ ಎಂಬುದು ಗೊತ್ತಿದೆ. ಸಮಸ್ಯೆ ನಿವಾರಣೆಗೆ ಆದ್ಯತೆ ನೀಡುತ್ತೇನೆ. ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೆರೆಗಳಿದ್ದು, ಜಲ ಮೂಲಗಳ ಪುನಶ್ಚೇತನಕ್ಕೆ ಒತ್ತು ಕೊಡುತ್ತೇನೆ. ಜಿಲ್ಲೆಯ ಸಮಸ್ಯೆ ತಿಳಿದು ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ. ಅಭಿವೃದ್ಧಿ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಜಿಲ್ಲಾಧಿಕಾರಿ ಕಚೇರಿಯ ನೌಕರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.