ADVERTISEMENT

ಕೋಲಾರ: ದೇಗುಲದಲ್ಲಿ ಮಾನಸಿಕ ಅಸ್ವಸ್ಥನ ಪುಂಡಾಟ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2020, 5:43 IST
Last Updated 2 ಫೆಬ್ರುವರಿ 2020, 5:43 IST
   

ಕೋಲಾರ: ನಗರದ ಕುರುಬರಪೇಟೆಯಲ್ಲಿರುವಪಂಚಮುಖಿ ಆಂಜನೇಯ ಸ್ವಾಮಿ‌ ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ರಂಪಾಟ‌‌ ಮಾಡಿದ‌ ಮಾನಸಿಕ ಅಸ್ವಸ್ಥ ಯುವಕನನ್ನು ಸಾರ್ವಜನಿಕರು ಶನಿವಾರ ರಾತ್ರಿ ಹಿಗ್ಗಾಮುಗ್ಗಾ ಥಳಿಸಿ‌ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ನಗರದ ಸಾರಿಗೆ‌ ನಗರ ನಿವಾಸಿಯಾಗಿರುವ ಯುವಕರಾತ್ರಿ 10 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಂದು ಏಕಾಏಕಿ ಗರ್ಭಗುಡಿಗೆ ನುಗ್ಗಿದ್ದಾನೆ. ಈ ವೇಳೆ ಅರ್ಚಕರು ಹಾಗೂ ಭಕ್ತರು ಆತನನ್ನು ದೇವಸ್ಥಾನದಿಂದ ಹೊರ ಕಳುಹಿಸಲು ಯತ್ನಿಸಿದ್ದಾರೆ. ಆದರೆ, ಭಕ್ತರು ಹಾಗೂ ಅರ್ಚಕರೊಂದಿಗೆ ವಾಗ್ವಾದ ನಡೆಸಿ, ದೇವರ ಎದುರು ಅಂಗಾತಮಲಗಿ ಬಟ್ಟೆ ಹರಿದುಕೊಂಡು, ‘ನನ್ನನ್ನು ಬಲಿ‌ ತೆಗೆದುಕೋ ದೇವರೇ’ ಎಂದು ಚೀರಾಡಿದ್ದಾನೆ.

ಇದರಿಂದ ಕೆರಳಿದ ಆತನನ್ನು ದೇವಸ್ಥಾನದಿಂದ ಹೊರಗೆ ಎಳೆದುಕೊಂಡು ಬಂದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯ ವಿಷಯ‌ ತಿಳಿದು‌ ಸ್ಥಳಕ್ಕೆ ಬಂದ ಶ್ರೀರಾಮಸೇನೆ, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆಸದಸ್ಯರು ಯುವಕನ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಯುವಕನಿಮ್ಹಾನ್ಸ್‌ನಲ್ಲಿಚಿಕಿತ್ಸೆ ಪಡೆಯುತ್ತಿದ್ದ. ದೇವಸ್ಥಾನಕ್ಕೆ ಅತಿಕ್ರಮ ಪ್ರವೇಶ, ಅಪರಾಧ ಸಂಚು ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ‌ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತನ ಪೂರ್ವಾಪರ ಹಾಗೂ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.