ಕೋಲಾರ: ‘ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದ ಅಭಿವೃದ್ಧಿ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ನ್ಯಾಯದ ಸಲುವಾಗಿ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲೇ ಸ್ಪರ್ಧಿಸಬೇಕು’ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮನವಿ ಮಾಡಿದ್ದಾರೆ.
‘ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ, ಎತ್ತಿನಹೊಳೆ ಯೋಜನೆ ಅನುಷ್ಠಾನದಲ್ಲಿ ಸಿದ್ದರಾಮಯ್ಯ ಅವರ ಪಾತ್ರವನ್ನು ಈ ಜಿಲ್ಲೆಯ ಜನ ಮರೆಯಲಾರರು. ಅದೇ ರೀತಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಾಪನೆ, ಕೋಲಾರ ಜಿಲ್ಲಾಡಳಿತ ಭವನ ನಿರ್ಮಾಣದಂಥ ಉಪಯುಕ್ತ ಕೆಲಸಗಳ ಮೂಲಕ ಅವರು ಇಲ್ಲಿನ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸಲು ಅನುಮತಿ ನೀಡುವಂತೆ ಮನವಿ ಮಾಡಿ ಕೆಪಿಸಿಸಿ ಹಾಗೂ ಎಐಸಿಸಿಗೆ ಪತ್ರ ಬರೆಯುತ್ತಿರುವುದಾಗಿ ಸುದರ್ಶನ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.