ADVERTISEMENT

ಜನಜೀವನ ಸ್ತಬ್ಧ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 9:19 IST
Last Updated 27 ನವೆಂಬರ್ 2020, 9:19 IST
ಮುಳಬಾಗಿಲು ತಾಲ್ಲೂಕು ಅಪ್ಪೇನಹಳ್ಳಿಯಲ್ಲಿ ಮನೆ ಕುಸಿದು ಬಿದ್ದಿರುವುದು
ಮುಳಬಾಗಿಲು ತಾಲ್ಲೂಕು ಅಪ್ಪೇನಹಳ್ಳಿಯಲ್ಲಿ ಮನೆ ಕುಸಿದು ಬಿದ್ದಿರುವುದು   

ಮುಳಬಾಗಿಲು: ನಿವಾರ್ ಚಂಡಮಾರುತದ ಪರಿಣಾಮ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಸ್ತಬ್ಧಗೊಂಡಿತು. ಸಾರ್ವಜನಿಕರು ಮನೆಯಿಂದ ಹೊರಬರಲು ಸಾಧ್ಯವಾಗದಷ್ಟು ಮಳೆ ಸುರಿಯಿತು.

ತಾಲ್ಲೂಕಿನ ತಾಯಲೂರು ಹೋಬಳಿಯ ಅಪ್ಪೆನಹಳ್ಳಿಯಲ್ಲಿ ಭಾಗ್ಯಮ್ಮ ಎಂಬುವರ ಮನೆ ಮಳೆಯ ರಭಸಕ್ಕೆ ಬಿದ್ದು ಹೋಗಿದೆ. ತಹಶೀಲ್ದಾರ್ ಕೆ.ಎನ್. ರಾಜಶೇಖರ್, ರಾಜಸ್ವ ನಿರೀಕ್ಷಕ ಸಿ. ಸುಬ್ರಮಣಿ ಒಳಗೊಂಡಂತೆ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಮನೆ ಬಿದ್ದ ಗ್ರಾಮಗಳಿಗೆ ತೆರಳಿ ಪರಿಶೀಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT