ADVERTISEMENT

ವಿದ್ಯುತ್ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 10:48 IST
Last Updated 30 ಅಕ್ಟೋಬರ್ 2020, 10:48 IST

ಕೋಲಾರ: ಟಿ. ಗೊಲ್ಲಹಳ್ಳಿ ವಿದ್ಯುತ್‌ ಸ್ವೀಕರಣಾ ಕೇಂದ್ರದ ವಿದ್ಯುತ್‌ ಮಾರ್ಗ ಮತ್ತು ಗೋಪುರ ನಿರ್ಮಾಣ ಕಾರ್ಯದ ಹಿನ್ನೆಲೆಯಲ್ಲಿ ಅ.30ರಿಂದ 20 ದಿನಗಳ ಕಾಲ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಕಾರ್ಯ ನಿರ್ವಾಹಕ ಎಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊದಲವಾಡಿ, ಗಾಂಧಿನಗರ, ಕಾಮದೇನಹಳ್ಳಿ, ಕೋಡಿಕಣ್ಣೂರು, ಕೋಡಿರಾಮಸಂದ್ರ, ಬಸವನತ್ತ, ಮೂರಾಂಡಹಳ್ಳಿ, ಶಿಳ್ಳಂಗೆರೆ, ಗದ್ದೆಕಣ್ಣೂರು, ಟಮಕ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿನಿತ್ಯ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್‌ ಸರಬರಾಜು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT