ADVERTISEMENT

ಕೋಲಾರ: ಆರು ಕಡೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 4:39 IST
Last Updated 18 ನವೆಂಬರ್ 2025, 4:39 IST
   

ಕೋಲಾರ: ಸಂಬಂಧವಿಲ್ಲದ ಮಾಲೀಕರ ಕೃಷಿ ಜಮೀನಿನ ಹೆಸರಲ್ಲಿ ಬೋನಾಫೈಡ್ ನಕಲಿ ಪ್ರಮಾಣಪತ್ರ ವಿತರಣೆ ಹಾಗೂ ಟ್ರ್ಯಾಕ್ಟರ್ ನೋಂದಣಿ ಪ್ರಕರಣ ಸಂಬಂಧ ಜಿಲ್ಲಾ ಲೋಕಾಯುಕ್ತ ಪೊಲೀಸರು ಕೋಲಾರ ಜಿಲ್ಲೆಯಲ್ಲಿ ಐದು ಕಡೆ ಹಾಗೂ ಚಿಂತಾಮಣಿಯಲ್ಲಿ ಒಂದು ಕಡೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಜಿಲ್ಲಾ ಲೋಕಾಯುಕ್ತ ಎಸ್ಪಿ ಆ್ಯಂಟನಿ ಜಾನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಸುಮಾರು 1,387 ನಕಲಿ ಬೋನಾಫೈಡ್ ದಾಖಲೆ‌ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹ 2 ಕೋಟಿ ನಷ್ಟ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.

ADVERTISEMENT

ನರಸಾಪುರ ನಾಡ ಕಚೇರಿಯ ಉಪ ತಹಶೀಲ್ದಾರ್ ನಾರಾಯಣಸ್ವಾಮಿ, ಹೊರಗುತ್ತಿಗೆ ಆಪರೇಟರ್ ಅಂಬುಜಾ, ಮಧ್ಯವರ್ತಿ ಮಂಜುನಾಥ್, ಚಿಂತಾಮಣಿಯ ಸಾಯಿ ಆದಿತ್ಯ ಟ್ರ್ಯಾಕ್ಟರ್ ಷೋರೂಂನ ಸೇಲ್ಸ್ ಮ್ಯಾನ್ ಗೋಕುಲ್ ರೆಡ್ಡಿ, ವ್ಯವಸ್ಥಾಪಕ ಆಂಜನೇಯರೆಡ್ಡಿ (ಕೋಲಾರ ನಗರ), ಆರ್ ಟಿ ಒ ಮಧ್ಯವರ್ತಿ ಅಶ್ವತ್ಥನಾರಾಯಣ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಶೋಧ ಕಾರ್ಯಾಚರಣೆ ‌ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.