ಮಾಲೂರು: ಹೃದಯಘಾತದಿಂದ ಮಾಲೂರು ತಹಶೀಲ್ದಾರ್ ಕೆ.ಮುನಿರಾಜು(58) ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.
ಇವರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.
ಇವರು ಮಾಲೂರಿನಲ್ಲಿ ತಹಶೀಲ್ದಾರ್ ಆಗಿದ ಮೂರು ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದರು.
ಮಾರ್ಚ್ 25ರಿಂದ ಜಿಲ್ಲಾಡಳಿತದ ಸೂಚನೆಯಂತೆ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಿದರು.
ಸಾರ್ವಜನಿಕರ ಹಿತ ಕಾಯುವ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಸ್ಥಳೀಯ ನಾಗರಿಕರು ಕಂಬನಿ ಮಿಡಿದಿದ್ದಾರೆ.
ಸಂಸದ ಮುನಿಸ್ವಾಮಿ, ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವಾರು ಮುಖಂಡರು ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.