ADVERTISEMENT

ಮಾಲೂರು ವಿಧಾನಸಭಾ ಕ್ಷೇತ್ರ: ಫಲಿತಾಂಶ ಯಥಾಸ್ಥಿತಿ?

ಬಿಗಿ ಭದ್ರತೆಯಲ್ಲಿ ಮರು ಮತ ಎಣಿಕೆ; ಅಂಚೆ ಮತಗಳಲ್ಲಿ ಮಾತ್ರ ವ್ಯತ್ಯಾಸ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 15:47 IST
Last Updated 11 ನವೆಂಬರ್ 2025, 15:47 IST
<div class="paragraphs"><p>ನಂಜೇಗೌಡ,&nbsp;ಕೆ.ಎಸ್‌.ಮಂಜುನಾಥಗೌಡ</p></div>

ನಂಜೇಗೌಡ, ಕೆ.ಎಸ್‌.ಮಂಜುನಾಥಗೌಡ

   

ಕೋಲಾರ: ಕುತೂಹಲ ಮೂಡಿಸಿದ್ದ ಮಾಲೂರು  ಕ್ಷೇತ್ರದ ಮತಗಳ ಮರು ಎಣಿಕೆ ಬಿಗಿ ಭದ್ರತೆಯಲ್ಲಿ ಮಂಗಳವಾರ ನಡೆಯಿತು. ಫಲಿತಾಂಶದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ರಾತ್ರಿ 8 ಗಂಟೆಗೆ ಎಣಿಕೆ ಕೇಂದ್ರದಿಂದ ಹೊರಬಂದ ಶಾಸಕ ಕೆ.ವೈ.ನಂಜೇಗೌಡ, ‘ಮರು ಮತ ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ. ನನಗೆ ನ್ಯಾಯ ದೊರಕಿದೆ’ ಎಂದರು. 

ADVERTISEMENT

ಸುಪ್ರೀಂ ಕೋರ್ಟ್‌ ಸೂಚನೆಯಂತೆ ಮರು ಮತ ಎಣಿಕೆ ಕಾರ್ಯ ನಡೆಯಿತು. ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಹೀಗಾಗಿ, ಆಯೋಗ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಲಿದೆ. ನ.24ಕ್ಕೆ ವಿಚಾರಣೆ ಸಾಧ್ಯತೆ ಇದೆ.

ಬಿಜೆಪಿಯ ಕೆ.ಎಸ್.ಮಂಜುನಾಥ ಗೌಡ, ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್, ಜಿಲ್ಲಾಧಿಕಾರಿ ಎಂ.ಆರ್‌.ರವಿ, ಚುನಾವಣಾಧಿಕಾರಿ ಡಾ.ಮೈತ್ರಿ, ವೀಕ್ಷಕ ಪ್ರಭು ನಾರಾಯಣಸಿಂಗ್‌ ಕೇಂದ್ರ ದಲ್ಲಿದ್ದರು.

2023ರ ಚುನಾವಣೆಯಲ್ಲಿ ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಫಲಿತಾಂಶ ಪ್ರಶ್ನಿಸಿ ಮಂಜುನಾಥ ಗೌಡ  ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.