ADVERTISEMENT

ಕೆಜಿಎಫ್‌ ನಗರಸಭೆ ಅಭ್ಯರ್ಥಿ ಆಯ್ಕೆಗೆ ಕಸರತ್ತು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 8:15 IST
Last Updated 12 ಅಕ್ಟೋಬರ್ 2020, 8:15 IST
ರಾಬರ್ಟ್‌ಸನ್‌ಪೇಟೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬೆಂಬಲಿತ ಸದಸ್ಯರ ಅಭಿಪ್ರಾಯ ಪಡೆಯಲು ಶಾಸಕಿ ಎಂ.ರೂಪಕಲಾ ಕೋಲಾರದ ಹೊರವಲಯದ ರೆಸಾರ್ಟ್‌ನಲ್ಲಿ ಸಭೆ ನಡೆಸಿದರು
ರಾಬರ್ಟ್‌ಸನ್‌ಪೇಟೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬೆಂಬಲಿತ ಸದಸ್ಯರ ಅಭಿಪ್ರಾಯ ಪಡೆಯಲು ಶಾಸಕಿ ಎಂ.ರೂಪಕಲಾ ಕೋಲಾರದ ಹೊರವಲಯದ ರೆಸಾರ್ಟ್‌ನಲ್ಲಿ ಸಭೆ ನಡೆಸಿದರು   

ಕೆಜಿಎಫ್‌: ರಾಬರ್ಟ್‌ಸನ್‌ಪೇಟೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬೆಂಬಲಿತ ಸದಸ್ಯರ ಅಭಿಪ್ರಾಯ ಪಡೆಯಲು ಶಾಸಕಿ ಎಂ.ರೂಪಕಲಾ ಕೋಲಾರದ ಹೊರವಲಯದ ರೆಸಾರ್ಟ್‌ನಲ್ಲಿ ಭಾನುವಾರ ಸಭೆ ನಡೆಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿ, ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದೆ. ಆಕಾಂಕ್ಷಿಗಳು ಕೂಡ ಇದ್ದಾರೆ. ಈ ನಿಟ್ಟಿನಲ್ಲಿ ಇತರ ಸದಸ್ಯರ ಅಭಿಪ್ರಾಯ ಮುಖ್ಯವಾಗಿದೆ. ಎಲ್ಲರ ಅಭಿಪ್ರಾಯದಂತೆ ಅಧಿಕಾರ ನೀಡಲಾಗುವುದು ಎಂದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುವವರು ನಗರದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು. ಜನರ ಮತ್ತು ಪಕ್ಷದ ಹಿತಕ್ಕೆ ತಕ್ಕಂತೆ ವರ್ತಿಸಬೇಕು. ಸಮಸ್ಯೆ ಇದ್ದರೆ ನೇರವಾಗಿ ನನಗೆ ಹೇಳಬೇಕು. ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸಬೇಕು ಎಂದರು.

ADVERTISEMENT

ಎಲ್ಲರ ಅಭಿಪ್ರಾಯವನ್ನು ಪಡೆದು, ಚುನಾವಣೆಗೆ ಮುನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಸದಸ್ಯರು ಸಹಕರಿಸಬೇಕು ಎಂದು ಕೋರಿದರು.

ಸಭೆಯಲ್ಲಿ ಕಾಂಗ್ರೆಸ್‌ನ 13 ಸದಸ್ಯರು, ಜೆಡಿಎಸ್‌ನ 3 ಸದಸ್ಯರು ಮತ್ತು 8 ಪಕ್ಷೇತರರು ಇದ್ದರು. ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮುಖಂಡರು ಕೋರಿದ್ದರು. ಬೇರೆ ಪಕ್ಷದವರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ವಾರ್ಡ್‌ಗಳ ಅಭಿವೃದ್ಧಿಗೆ ಒತ್ತು ಕೊಟ್ಟರೆ ಬೆಂಬಲ ನೀಡುವುದಾಗಿ ತಿಳಿಸಿರುವುದಾಗಿ ಜೆಡಿಎಸ್‌ ಮುಖಂಡ ರಮೇಶ್ ಮಾಹಿತಿ ನೀಡಿದರು.

ಕಾಂಗ್ರೆಸ್‌ ಪಕ್ಷದಿಂದ ವಳ್ಳಲ್‌ ಮುನಿಸ್ವಾಮಿ, ರಮೇಶ್‌ ಕುಮಾರ್, ಮಾಣಿಕ್ಯಂ, ಜಯಪಾಲ್‌ ಆಕಾಂಕ್ಷಿಗಳಾಗಿದ್ದೇವೆ ಎಂದು ಶಾಸಕಿಗೆ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.