ADVERTISEMENT

ಕೆರೆ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಸಂಸದರ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 5:16 IST
Last Updated 28 ಜುಲೈ 2022, 5:16 IST
ಕೋಲಾರದಲ್ಲಿ ಬುಧವಾರ ಸಂಸದ ಎಸ್‌.ಮುನಿಸ್ವಾಮಿ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್‌ ಕುಮಾರ್‌ ಇದ್ದಾರೆ
ಕೋಲಾರದಲ್ಲಿ ಬುಧವಾರ ಸಂಸದ ಎಸ್‌.ಮುನಿಸ್ವಾಮಿ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್‌ ಕುಮಾರ್‌ ಇದ್ದಾರೆ   

ಕೋಲಾರ: ಸ್ವಾತಂತ್ರ್ಯ ಅಮೃತ ಮಹೋತ್ಸವd ಪ್ರಯುಕ್ತ ಅಮೃತ್ ಸರೋವರ್ ಯೋಜನೆಯಡಿ ಜಿಲ್ಲೆಯ ಕೆರೆಗಳ ಶುದ್ಧೀಕರಣ, ಪುನರುಜ್ಜೀವನ ಹಾಗೂ ಸುಂದರೀಕರಣ ಕಾಮಗಾರಿಗೆ ಬೇಗನೇ ಚಾಲನೆ ನೀಡಬೇಕು ಎಂದು ಸಂಸದ ಎಸ್‌. ಮುನಿಸ್ವಾಮಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಬಂಧ ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಯೋಜನೆಗೆ ಬಿಡುಗಡೆಯಾಗಿರುವ ₹ 24 ಕೋಟಿ ಅನುದಾನ ಸಂಬಂಧ ಪರಿಶೀಲನೆ ನಡೆಸಿದರು.

‘ಕಾಮಗಾರಿಗೆ ಚಾಲನೆ ನೀಡಿ ಕೆರೆಗಳನ್ನು ಪುನರುಜ್ಜೀವನ ಗೊಳಿಸಿ, ಸುಂದರವಾಗಿಸಬೇಕು’ ಎಂದರು.

ADVERTISEMENT

ಕೆರೆ ಅಭಿವೃದ್ಧಿಗೆ ಸಂಬಂಧಿಸಿದ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳು, ತಹಶೀಲ್ದಾರ್‌ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್‌ ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.