ADVERTISEMENT

ಸಿದ್ದರಾಮಯ್ಯ ಸಮ್ಮುಖದಲ್ಲಿ ಮುನಿಯಪ್ಪ, ಖರ್ಗೆಗೆ ಜಯಘೋಷ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2022, 8:27 IST
Last Updated 13 ನವೆಂಬರ್ 2022, 8:27 IST

ಕೋಲಾರ: ಪ್ರತ್ಯೇಕವಾಗಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಬಣದವರು ಸ್ವಾಗತ ಕೋರಿದರು.

ಭಾನುವಾರ ಮಧ್ಯಾಹ್ನ ಇಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿ ಸೇರಿದ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯ ಸಮ್ಮುಖದಲ್ಲಿ ಮುನಿಯಪ್ಪ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಯಘೋಷ ಹಾಕಿದರು.

ಬಳಿಕ ಸಿದ್ದರಾಮಯ್ಯ ಅವರಿಗೆ ಬೃಹತ್ ಹಾರ ಹಾಕಿ ಸ್ವಾಗತಿಸಿದರು. ಅಂಬೇಡ್ಕರ್ ಪ್ರತಿಮೆಗೆ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ದಲಿತ ಮುಖಂಡರು ಭಾಗಿಯಾಗಿದ್ದರು.

ADVERTISEMENT

ಈ ಸಂದರ್ಭದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಬಣದವರು, 'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.