ADVERTISEMENT

ಸಿಗದ ಮದ್ಯಪಾನ; ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 11:26 IST
Last Updated 30 ಮಾರ್ಚ್ 2020, 11:26 IST

ನಂಗಲಿ: ಮದ್ಯಪಾನ ಸಿಗಲಿಲ್ಲ ಎಂದು ಬೇಸರಗೊಂಡ ಮುದಿಗೆರೆ ಮಜರಾ ಗಡ್ಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಂ.ಶಂಕರ ಎಂಬುವವರು ಚಾಕುವಿನಲ್ಲಿ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

ಸೋಮವಾರ ಮುಂಜಾನೆ ಮದ್ಯಕ್ಕಾಗಿ ಹುಡುಕಾಡಿ ಸಿಗದೆ ಇದ್ದುದ್ದರಿಂದ ಚಾಕುವಿನಿಂದ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ರಕ್ತಸ್ರಾವದಿಂದ ಚೀರಾಟ ಮಾಡುತ್ತಿದ್ದಾಗ ಮನೆಯವರು ನೋಡಿ ನಂಗಲಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಕತ್ತು ಅರ್ಧ ಭಾಗ ಸೀಳಿ ವಿಪರೀತ ರಕ್ತಸ್ರಾವವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಜಾಲಪ್ಪ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಲಾಗಿದೆ ಎಂದು ಸಂಬಂಧಿಕರು ತಿಳಿಸಿದರು.

ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಗೆ ಇಬ್ಬರು ಮಕ್ಕಳು ಮತ್ತು ಹೆಂಡತಿ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.