ADVERTISEMENT

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 15:16 IST
Last Updated 9 ಅಕ್ಟೋಬರ್ 2020, 15:16 IST
ಜಿ.ವೆಂಕಟಾಚಲಪತಿ
ಜಿ.ವೆಂಕಟಾಚಲಪತಿ   

ಕೋಲಾರ: ನಗರದ ವಕೀಲ ಜಿ.ವೆಂಕಟಾಚಲಪತಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟಾಚಲಪತಿ, ‘ಪರಿಶಿಷ್ಟರು ಮೀಸಲು ಕ್ಷೇತ್ರಗಳಿಗೆ ಮಾತ್ರ ಸೀಮಿತರಾಗದೆ ಸಾಮಾನ್ಯ ಕ್ಷೇತ್ರಗಳಿಂದಲೂ ಸ್ಪರ್ಧಿಸಬೇಕೆಂಬ ಸಂದೇಶ ರವಾನಿಸುವ ಉದ್ದೇಶಕ್ಕೆ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ಹೇಳಿದರು.

‘ಮೀಸಲು ಕ್ಷೇತ್ರಗಳಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಪರಿಶಿಷ್ಟ ನಿರುದ್ಯೋಗಿ ಯುವಕ ಯುವತಿಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದಲಿತರ ಮೇಲೆ ದೌರ್ಜನ್ಯ, ಹಲ್ಲೆ ನಡೆದರೂ ಧ್ವನಿ ಎತ್ತುತ್ತಿಲ್ಲ. ಸಾಕಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ ಸಾಲ ಸೌಲಭ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ’ ಎಂದು ದೂರಿದರು.

ADVERTISEMENT

‘ಕೂಲಿ ಕೆಲಸ ಮಾಡಲಾಗದೆ, ಅರ್ಹತೆಗೆ ತಕ್ಕ ಕೆಲಸ ಸಿಗದೆ ನಿರುದ್ಯೋಗಿ ಯುವಕ ಯುವತಿಯರು ಹತಾಶರಾಗಿದ್ದಾರೆ. ನಿರುದ್ಯೋಗಿಗಳ ಪರ ವಿಧಾನ ಪರಿಷತ್‌ನಲ್ಲಿ ಧ್ವನಿ ಎತ್ತಲು ಮತದಾರರು ನನ್ನನ್ನು ಬೆಂಬಲಿಸಬೇಕು. ವಿದ್ಯಾರ್ಥಿ ಹೋರಾಟಗಳಲ್ಲಿ ನನ್ನ ಜತೆ ಭಾಗಿಯಾಗಿದ್ದ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.