ADVERTISEMENT

ಮುಖ್ಯಮಂತ್ರಿ ಗಾದಿಗೆ ಲಾಬಿ ಮಾಡಿಲ್ಲ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 14:36 IST
Last Updated 5 ಜೂನ್ 2020, 14:36 IST
ಜಗದೀಶ್‌ ಶೆಟ್ಟರ್
ಜಗದೀಶ್‌ ಶೆಟ್ಟರ್   

ಕೋಲಾರ: ‘ರಾಜ್ಯದಲ್ಲಿ ಯಡಿಯೂರಪ್ಪ ಅವರೇ ಮುಂದಿನ 3 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಅವರ ನೇತೃತ್ವದಲ್ಲಿ ನಾನು ಸಚಿವನಾಗಿ ಕೆಲಸ ಮಾಡುತ್ತೇನೆ’ ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ತಾಲ್ಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಲಾಬಿ ನಡೆಸಿಲ್ಲ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಸರ್ಕಾರಕ್ಕೆ ಅಪಾಯವೂ ಇಲ್ಲ’ ಎಂದು ತಿಳಿಸಿದರು.

‘ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್‌ಗಾಗಿ ಪಕ್ಷದಲ್ಲಿ ಪೈಪೋಟಿ ನಡೆಯುತ್ತಿದೆ. ಬಿಜೆಪಿಯಲ್ಲಿ 40 ಮಂದಿ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಾನು ಹೊರಗೆ ಹೇಳುವುದಿಲ್ಲ. ಪಕ್ಷದ ಚೌಕಟ್ಟಿನಲ್ಲಿ ನನ್ನ ಅಭಿಪ್ರಾಯ ತಿಳಿಸುವೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಸಂಬಂಧ ಶನಿವಾರ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿರ್ಧಾರವಾಗಲಿದೆ. ಸರ್ಕಾರದ ವಿರುದ್ಧ ಉಮೇಶ್ ಕತ್ತಿ ಬೇಸರಗೊಂಡಿದ್ದಾರೆ ಎಂಬ ವಿಚಾರ ಮಾಧ್ಯಮಗಳ ಸೃಷ್ಟಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.