ADVERTISEMENT

ಮಾಲೂರು: ವಿದ್ಯುತ್ ಅಡಚಣೆಗೆ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 3:03 IST
Last Updated 19 ಸೆಪ್ಟೆಂಬರ್ 2020, 3:03 IST
ಮಾಲೂರು ದಲಿತ ಸಿಂಹ ಸೇನೆ ಕರ್ನಾಟಕ ಸಂಘಟನೆಯ ಸದಸ್ಯರು ಶನಿವಾರ ಮತ್ತು ಭಾನುವಾರ ವಿದ್ಯುತ್ ಅಡಚಣೆ ಖಂಡಿಸಿ ತಾಂತ್ರಿಕ ಎಂಜಿನಿಯರ್ ಯಳದಪ್ಪ ಅವರಿಗೆ ಮನವಿ ಸಲ್ಲಿಸಿದರು
ಮಾಲೂರು ದಲಿತ ಸಿಂಹ ಸೇನೆ ಕರ್ನಾಟಕ ಸಂಘಟನೆಯ ಸದಸ್ಯರು ಶನಿವಾರ ಮತ್ತು ಭಾನುವಾರ ವಿದ್ಯುತ್ ಅಡಚಣೆ ಖಂಡಿಸಿ ತಾಂತ್ರಿಕ ಎಂಜಿನಿಯರ್ ಯಳದಪ್ಪ ಅವರಿಗೆ ಮನವಿ ಸಲ್ಲಿಸಿದರು   

ಮಾಲೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜೀವನಾಧಾರಿತಧಾರಾವಾಹಿ ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ 7 ರ ತನಕ ಪ್ರಸಾರವಾಗುತ್ತಿದ್ದು, ಈ ಸಮಯದಲ್ಲಿ ವಿದ್ಯುತ್ಅಡಚಣೆ ಖಂಡಿಸಿ ದಲಿತ ಸಿಂಹ ಸೇನೆ ಕರ್ನಾಟಕ ಸಂಘಟನೆಯ ಸದಸ್ಯರುಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ತಿಪ್ಪಸಂದ್ರ ಶ್ರೀನಿವಾಸ್ ಮಾತನಾಡಿ, ‘ಇತ್ತೀಚೆಗೆ ಕೆಲವು ಮನುವಾದಿಗಳು ಮತ್ತು ಪಟ್ಟಬಧ್ರ ಹಿತಾಸಕ್ತಿಗಳುಧಾರಾವಾಹಿ ನಿಲ್ಲಿಸುವಂತೆ ಬೆದರಿಕೆ ಹಾಕಿರುವುದು ರಾಜ್ಯ ಸರ್ಕಾರಕ್ಕೆ ಗೊತ್ತಿರುವ ವಿಚಾರ. ಆದರೆ, ಮಾಲೂರು ಬೆಸ್ಕಾಂ ಇಲಾಖೆ ಶನಿವಾರ ಮತ್ತು ಭಾನುವಾರ ಸಂಜೆ 6-7 ರ ತನಕ ಉದ್ದೇಶ ಪೂರ್ವಕವಾಗಿ ವಿದ್ಯುತ್‌ ಕಡಿತಗೊಳಿಸುತ್ತಿರುವುದು ನೋವಿನ ಸಂಗತಿ’ ಎಂದು ಆರೋಪಿಸಿದರು.

ಕೋವಿಡ್-19ನಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಶಿಕ್ಷಣ ನೀಡುತ್ತಿದ್ದು, ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ತಾಲ್ಲೂಕಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಗಾಗಿ ಸಂಜೆ ವಿದ್ಯುತ್ ಕಡಿತಗೊಳಿಸುತ್ತಿರುವ ಸಿಬ್ಬಂದಿಯ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಅಧ್ಯಕ್ಷ ದೊಡ್ಡ ಕಲ್ಲಹಳ್ಳಿ ವೆಂಕಟೇಶ್, ಉಪಾಧ್ಯಕ್ಷ ಎಟ್ಟಕೋಡಿ ಸಂತೋಷ್, ಜಿಲ್ಲಾ ಯುವಘಟಕದ ಅಧ್ಯಕ್ಷ ಸುಭಾಶ್, ಮುಖಂಡರಾದ ಗುಂಡೂರು ಮಂಜುನಾಥ್, ಮಾರಪ್ಪ, ಚೆನ್ನರಾಯಪ್ಪ, ಕಾಂತರಾಜ್, ಮಂಜು, ಸಂದೀಪ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.