ADVERTISEMENT

ಕಸಾಪ ಆವರಣದಲ್ಲಿ ಪಂಪನ ಪ್ರತಿಮೆ: ಮಹೇಶ್ ಜೋಷಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 22:33 IST
Last Updated 18 ಜನವರಿ 2024, 22:33 IST
ಮಹೇಶ್ ಜೋಷಿ
ಮಹೇಶ್ ಜೋಷಿ   

ಮುಳಬಾಗಿಲು (ಕೋಲಾರ ಜಿಲ್ಲೆ): ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಕಚೇರಿ ಆವರಣದಲ್ಲಿ ಆದಿಕವಿ ಪಂಪನ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಕಸಾಪ ರಾಜ್ಯ ಅಧ್ಯಕ್ಷ ಮಹೇಶ್ ಜೋಷಿ ಹೇಳಿದ್ದಾರೆ. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ಹಂಚಿಕೊಂಡ ಅವರು, ‘ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಉಪ್ಪುಕುಂಟೆಯಲ್ಲಿರುವ ಶ್ರೀಕಾಳಿಕಾದೇವಿ ಶಿಲ್ಪಕಲಾ ಮಂದಿರದಲ್ಲಿ ₹5 ಲಕ್ಷ ವೆಚ್ಚದಲ್ಲಿ ಪಂಚಲೋಹದ ಪ್ರತಿಮೆ ಸಿದ್ಧವಾಗುತ್ತಿದೆ’ ಎಂದು ತಿಳಿಸಿದರು.

ಪ್ರತಿಮೆ ನಿರ್ಮಾಣ ಶೇ 80ರಷ್ಟು ಪೂರ್ಣಗೊಂಡಿದ್ದು, ಎರಡು ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಯಲಿದೆ. ಎರಡು ಅಡಿ ಅಗಲ, ಮೂರು ಅಡಿ ಎತ್ತರದ ಮೂರ್ತಿ 90ರಿಂದ ನೂರು ಕೆ.ಜೆ ತೂಕವಿರಲಿದೆ. ಕಲಾವಿದ ಎಸ್‌. ಮಂಜುನಾಥ ಪ್ರತಿಮೆ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.