ಕೋಲಾರ: ಏಷ್ಯಾಕಪ್ ಟಿ–20 ಕ್ರಿಕೆಟ್ ಟೂರ್ನಿಯಲ್ಲಿ ಭಾರತ ವಿರುದ್ಧ ಗೆದ್ದ ಪಾಕಿಸ್ತಾನ ತಂಡ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದ ಆರೋಪದ ಮೇಲೆ ಮೂವರ ವಿರುದ್ಧ ಶ್ರೀನಿವಾಸಪುರ ಪಟ್ಟಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಸುಹೇಲ್ ಎಂಬಾತನನ್ನು ಬಂಧಿಸಿದ್ದಾರೆ.
ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾ ನಿವಾಸಿ ಸುಹೇಲ್, ತೋಹಿದ್ ಪಾಷಾ, ಎಸ್.ಕೆ.ಮನ್ಸೂರ್ ಉಲ್ಲಾ ಪಾಕಿಸ್ತಾನ ಪರ ಘೋಷಣೆಯ ಸಂದೇಶವನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದ ಆರೋಪಿಗಳು.
‘ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನ ಧ್ವಜದೊಂದಿಗೆ ಭಾರತ ತಂಡಕ್ಕೆ ಅಣುಕಿಸುವ ಹಾಗೆ 1) Kaisa harai mamu ek baar boldalo haters ko. 2) Thumhari smile ko fida hojatin haters, king always king. 3) Kya pak hi kyat tum, support pak ಸಂದೇಶ ಬರೆದುಕೊಂಡಿದ್ದಾರೆ. ಸೆ.4ರಂದು ಈ ಪಂದ್ಯ ನಡೆದಿತ್ತು.
ಇವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿ.ರಾಮಾಂಜಿ ಎಂಬುವರು ಶ್ರೀನಿವಾಸಪುರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸೆ.6ರಂದು ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.