ಕೋಲಾರ: ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಸುಪಾರಿ ಕಿಲ್ಲರ್ ಬಾಲಾಜಿ ಸಿಂಗ್ ಕಾಲಿಗೆ ಕೋಲಾರ ಪೊಲೀಸರು ಶುಕ್ರವಾರ ಬೆಳಿಗ್ಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಮುಳಬಾಗಿಲು ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಲಕ್ಷ್ಮೀಕಾಂತ್ ನೇತೃತ್ವದಲ್ಲಿ ತಾಲ್ಲೂಕಿನ ಚೆಲುವನಹಳ್ಳಿ ಅರಣ್ಯ ಪ್ರದೇಶದ ಬಳಿಯ ಹೆದ್ದಾರಿಯಲ್ಲಿ ಈ ಫೈರಿಂಗ್ ನಡೆದಿದೆ.
ಆರೋಪಿ ಅಡಗಿರುವ ಮಾಹಿತಿ ಮೇರೆಗೆ ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಬಾಲಾಜಿ ಸಿಂಗ್ ಬಲಗಾಲಿಗೆ ಗುಂಡು ಬಿದ್ದಿದ್ದು, ಕೋಲಾರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
'ಬೆಳಿಗ್ಗೆ 6 ಗಂಟೆಗೆ ಆರೋಪಿಯನ್ನು ವಶಕ್ಕೆ ಪಡೆದೆವು. ಈ ಸಂದರ್ಭದಲ್ಲಿ ಮೂತ್ರಕ್ಕೆ ಹೋಗುವುದಾಗಿ ಹೇಳಿ ಪೊಲೀಸರಿಂದ ಕೈಬಿಡಿಸಿಕೊಂಡ. ಆತನನ್ನು ಹಿಡಿದುಕೊಳ್ಳಲು ಮುಂದಾದ ಪೊಲೀಸ್ ಗೆ ಕಲ್ಲು ಬೀಸಿ ಓಡಿದ. ಈ ಸಂದರ್ಭದಲ್ಲಿ ಫೈರಿಂಗ್ ನಡೆಸಿದೆವು' ಎಂದು ಇನ್ ಸ್ಪೆಕ್ಟರ್ ಲಕ್ಷ್ಮೀಕಾಂತ್ 'ಪ್ರಜಾವಾಣಿ'ಗೆ ತಿಳಿಸಿದರು.
ಜಿಲ್ಲಾಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ದೇವರಾಜ್, ಡಿವೈಎಸ್ಪಿ ಜೈ ಶಂಕರ್ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.