ADVERTISEMENT

ಜನಸಂಖ್ಯೆ ನಿಯಂತ್ರಣ: ಉತ್ತಮ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 15:20 IST
Last Updated 16 ಜುಲೈ 2021, 15:20 IST

ಕೋಲಾರ: ‘ಜನಸಂಖ್ಯೆ ನಿಯಂತ್ರಣ ವಿಚಾರವಾಗಿ ಉತ್ತರ ಪ್ರದೇಶದಲ್ಲಿ ಉತ್ತಮ ತೀರ್ಮಾನ ತೆಗೆದುಕೊಂಡಿದ್ದಾರೆ. ಕರ್ನಾಟಕದಲ್ಲೂ ಅದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜನಸಂಖ್ಯೆ ನಿಯಂತ್ರಣವು ಯಾವುದೋ ಒಂದು ಸಮುದಾಯಕ್ಕೆ ಸೀಮಿತವಲ್ಲ. ಇದರಲ್ಲಿ ಜಾತಿ, ಮತ, ಪಂಥವಿಲ್ಲ. ರಾಜ್ಯದ, ರಾಷ್ಟ್ರದ ಎಲ್ಲಾ ವರ್ಗಕ್ಕೂ ಸಮಾನ ನ್ಯಾಯ ಸಿಗಲಿದೆ. ಶಾಸಕ ಜಮೀರ್ ಅಹಮ್ಮದ್ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡ್ತಾರೆ. ಅವರು ಮತೀಯವಾದಿ’ ಎಂದು ಟೀಕಿಸಿದರು.

‘ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಶ್ವಕ್ಕೆ ಮಾದರಿಯಾಗಿ ಕೋವಿಡ್‌ ನಿಯಂತ್ರಿಸಿದೆ. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರದಲ್ಲಿ ಮನಮೋಹನ್‌ ಸಿಂಗ್‌ ಹಾಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಜಾತಿ, ಮತದ ಆಧಾರದಲ್ಲಿ ಲಸಿಕೆ ನೀಡುತ್ತಿದ್ದರು’ ಎಂದು ಕುಟುಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.