ಕೋಲಾರ: ನಗರದ ಟಮಕ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳಿಂದ ನಿರ್ಗತಿಕರಾಗಿ ಸುತ್ತಾಡಿಕೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಅಂಗವಿಲಕರ ಕಲ್ಯಾಣಾಧಿಕಾರಿ ಜಗದೀಶ್ ರಕ್ಷಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ಈ ವ್ಯಕ್ತಿ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಸಿಬ್ಬಂದಿ ಜತೆ ಸ್ಥಳಕ್ಕೆ ಹೋದ ಜಗದೀಶ್ ವ್ಯಕ್ತಿಯನ್ನು ರಕ್ಷಿಸಿದರು. ಬಳಿಕ ಬೆಂಗಳೂರಿನ ಹೋಮ್ ಫಾರ್ ಹೋಪ್ ಕೇಂದ್ರಕ್ಕೆ ಸ್ಥಳಾಂತರಿಸಿದರು.
‘ಹಿರಿಯ ನಾಗರೀಕರಾದ ರಮಾನಾಥ್ ಮತ್ತು ಸ್ನೇಹಿತರು ಈ ನಿರ್ಗತಿಕ ವ್ಯಕ್ತಿಯನ್ನು ಗುರುತಿಸಿ ಇಲಾಖೆಯ ಗಮನ ಸೆಳೆದರು. ಸಾರ್ವಜನಿಕರು ಸಂಕಷ್ಟದಲ್ಲಿರುವ ಹಿರಿಯ ನಾಗರೀಕರ ಬಗ್ಗೆ ಇಲಾಖೆಗೆ ಮಾಹಿತಿ ನೀಡಿದರೆ ಅಂತಹವರನ್ನು ರಕ್ಷಣೆ ಮಾಡುತ್ತೇವೆ’ ಎಂದು ಜಗದೀಶ್ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.