ADVERTISEMENT

ಕೋಲಾರ: ನಾಗಮಂಗಲ ಘಟನೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 4:05 IST
Last Updated 13 ಸೆಪ್ಟೆಂಬರ್ 2024, 4:05 IST
ಕೋಲಾರದಲ್ಲಿ ಬಿಜೆಪಿ ಮುಖಂಡರು ನಾಗಮಂಗಲದ ಪ್ರಕರಣ ಖಂಡಿಸಿ ಗುರುವಾರ ಪ್ರತಿಭಟನೆ ನಡೆಸಿದರು
ಕೋಲಾರದಲ್ಲಿ ಬಿಜೆಪಿ ಮುಖಂಡರು ನಾಗಮಂಗಲದ ಪ್ರಕರಣ ಖಂಡಿಸಿ ಗುರುವಾರ ಪ್ರತಿಭಟನೆ ನಡೆಸಿದರು   

ಕೋಲಾರ: ಮಂಡ್ಯ ಜಿಲ್ಲೆಯ ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ದಾಳಿ ಖಡಿಸಿ ಗುರುವಾರ ಅಖಂಡ ಭಾರತ ವಿನಾಯಕ ಮಹಾಸಭಾ ಹಾಗೂ ಹಿಂದೂ ಸಂಘಟನೆಗಳು ನಗರದ ಪ್ರವಾಸಿ ಮಂದಿರ ಮುಂದೆ ಪ್ರತಿಭಟನೆ ನಡೆಸಿದವು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕೋಮುಗಲಭೆ ನಡೆಯುತ್ತಿದೆ. ರಾಜ್ಯದಲ್ಲೂ ಉತ್ತರಪ್ರದೇಶದ ಮಾದರಿ ಸರ್ಕಾರ ರಚನೆಯಾಗಬೇಕು. ಮುಂದೆ ಇಂಥ ಕೃತ್ಯ ನಡೆಯದ ರೀತಿಯಲ್ಲಿ ಪುಂಡರಿಗೆ ಪಾಠ ಕಲಿಸಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಾದ್ಯಂತ ಮತಾಂಧ ಶಕ್ತಿಗಳ ಅಟ್ಟಹಾಸ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.

‘ಕೋಲಾರದಲ್ಲೂ ಇಂಥ ಘಟನೆಗಳು ನಡೆಯಬಹುದು. ಹಿಂದೂಗಳಾದ ನಾವು ಇದನ್ನು ಪ್ರಶ್ನೆ ಮಾಡಬೇಕು ಮತ್ತು ಖಂಡಿಸಬೇಕಾಗಿದೆ. ನಾಗಮಂಗಲ ಪ್ರಕರಣ ಸಂಬಂಧ ಕೂಡಲೇ ರಾಷ್ಟ್ರದ್ರೋಹಿ ಪ್ರಕರಣ ದಾಖಲಿಸಬೇಕು. ಗಲಭೆಗೆ ಕಾರಣರಾದವರನ್ನು ಈ ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಬಿಜೆಪಿ ಮುಖಂಡರಾದ ವಿಜಯಕುಮಾರ್, ಪ್ರವೀಣಗೌಡ, ನಾಮಲ್ ಮಂಜು, ಬಜರಂಗದಳ ಬಾಬು, ಸುರೇಶ್ ರಾಜ್, ಬಾಲಾಜಿ, ಗಾಂಧಿನಗರ ಮಹೇಶ್, ಎಬಿವಿಪಿ ಹರೀಶ್, ಸಂಪತ್, ಶಶಿ, ಮುರಳಿ, ವಿನಯ್, ರವಿಕುಮಾರ್, ಶ್ರೀನಿವಾಸ್, ಸಾಯಿಮೌಳಿ ಇದ್ದರು,

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.