ADVERTISEMENT

ಬಂಗಾರಪೇಟೆ: ಜೂ.28ರಿಂದ 3 ದಿನ ಪಡಿತರ ಸ್ಥಗಿತ 

​ಪ್ರಜಾವಾಣಿ ವಾರ್ತೆ
Published 21 ಜೂನ್ 2023, 16:07 IST
Last Updated 21 ಜೂನ್ 2023, 16:07 IST

ಬಂಗಾರಪೇಟೆ: ಜೂ. 28ರಿಂದ ಆಹಾರ ಇಲಾಖೆಯ ಸರ್ವರ್ ಮೂರುದಿನಗಳ ಕಾಲ ಸ್ಥಗಿತಗೊಳ್ಳುವುದರಿಂದ ಪಡಿತರದಾರರು ಜೂ. 27ರೊಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ಪಡೆದುಕೊಳ್ಳಬೇಕು ಎಂದು ಆಹಾರ ಶಿರಸ್ತೆದಾರ್ ಅಭಿಜಿತ್ ತಿಳಿಸಿದ್ದಾರೆ.

ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆಯಲ್ಲಿ ಮಾತನಾಡಿ, ಜುಲೈ ತಿಂಗಳಿಂದ ಕುಟುಂಬದ ಸದಸ್ಯರಿಗೆ ತಲಾ 10ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಈ ಕಾರಣದಿಂದಾಗಿ ಇಲಾಖೆ ತಂತ್ರಾಂಶದಲ್ಲಿ ಕೆಲವು ಬದಲಾವಣೆ ಮಾಡಬೇಕಿದ್ದು, 28ರಿಂದ ಮೂರುದಿನಗಳ ಕಾಲ ಇಲಾಖೆಯ ಸರ್ವರ್ ಕೆಲಸ ಸ್ಥಗಿತಗೊಳ್ಳಲಿದೆ ಎಂದರು.

ಜೂ. 27ರೊಳಗೆ ಪಡಿತರ ಅಂಗಡಿಗಳಲ್ಲಿ ತಮ್ಮ ಪಾಲಿನ ಅಕ್ಕಿ, ರಾಗಿಯನ್ನು ಪಡೆಯಬೇಕು. ಜುಲೈ 1ರಂದೇ ಎಲ್ಲ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿಯಲ್ಲಿರುವ ಸದಸ್ಯರಿಗೆ ತಲಾ 10ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಬೇಕು. ಅದಕ್ಕಾಗಿ ಈ ತಿಂಗಳ 28ರಿಂದಲೇ ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಬೇಕು ಎಂದು ತಿಳಿಸಿದರು.

ADVERTISEMENT

ಆಹಾರ ನಿರೀಕ್ಷಕ ಗೋಪಾಲ್, ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಹುನ್ಕುಂದ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಕಣಿಂಬೆಲೆ ಶ್ರೀನಿವಾಸ್, ಪೆದ್ದಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.