ಕೋಲಾರ: ಹಲವು ತಿಂಗಳಿಂದ ಖಾಲಿಯಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ಎಂ.ಆರ್.ರವಿಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಈ ಹಿಂದೆ ಜಿ.ಪಂ ಸಿಇಒ ಆಗಿದ್ದ ಎಚ್.ವಿ.ದರ್ಶನ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿತ್ತು. ನಂತರ ಸಿಇಒ ಹುದ್ದೆಗೆ ಯಾರನ್ನೂ ನಿಯೋಜಿಸಿರಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರೇ ಪ್ರಭಾರವಾಗಿ ಸಿಇಒ ಹುದ್ದೆಯ ಕಾರ್ಯಭಾರ ವಹಿಸಿಕೊಂಡಿದ್ದರು.
ಸಿಇಒ ಹುದ್ದೆಗೆ ಕಾಯಂ ಅಧಿಕಾರಿ ನೇಮಿಸುವಂತೆ ಸಂಘಟನೆಗಳು ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಇದರ ಬೆನ್ನಲ್ಲೇ ಸರ್ಕಾರ ರವಿಕುಮಾರ್ ಅವರನ್ನು ಸಿಇಒ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದೆ. ಸದ್ಯ ರವಿಕುಮಾರ್, ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ (ಕೆಎಸ್ಎಂಬಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.