ಕೋಲಾರ: ಗೋಮಾಳ ಜಮೀನಿನಲ್ಲಿರುವ ಸ್ಮಶಾನವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ತೆರವು ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಸುಗಟೂರು ಹೋಬಳಿ ವೆಲಗಲಬುರ್ರೆ ಗ್ರಾಮದಲ್ಲಿ ಗೋಮಾಳ ಜಮೀನಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ರುದ್ರಭೂಮಿ ಇದೆ. ಸರ್ವೆ ನಂಬರ್ 8/1 ರಲ್ಲಿ ಎರಡು ಎಕರೆ 26 ಗುಂಟೆ, ಸರ್ವೆ ನಂಬರ್ 8/2 ರಲ್ಲಿ ಎರಡು ಎಕರೆ 26 ಗುಂಟೆ ಜಮೀನು ಇದೆ. ಅದರಲ್ಲಿ ಗ್ರಾಮದ ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಸ್ಮಶಾನವನ್ನು ರಕ್ಷಿಸಿಕೊಡುವಂತೆ ಶುಕ್ರವಾರ ಉಪ ವಿಭಾಗಾಧಿಕಾರಿ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಲಾಯಿತು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಹೂಹಳ್ಳಿ ನಾಗೇಶ್, ಯಲ್ಲಪ್ಪ, ಮುನಿರಾಜು, ಗ್ರಾಮಸ್ಥರಾದ ವಿ.ಎನ್.ಅರುಣ್ಕುಮಾರ್, ವಿ.ಎನ್. ವಿಶ್ವನಾಥ್, ನವೀನ್ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.