ಬೇತಮಂಗಲ: ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ ಅವರ ಅನುದಾನದಲ್ಲಿ ಕೊರೆಯಿಸಿದ ಕೊಳವೆಬಾವಿಯಲ್ಲಿ ಉತ್ತಮ ನೀರು ಸಿಕ್ಕಿದ್ದು, ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಎಂದು ಗ್ರಾ.ಪಂ. ಸದಸ್ಯ ನಾಗರಾಜ್ ಹೇಳಿದರು.
ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾ.ಪಂ. ವ್ಯಾಪ್ತಿಯ ನಾಗಶೇಟ್ಟಹಳ್ಳಿ ಗ್ರಾಮದಲ್ಲಿ ರೂಪಾ ಅವರು ತಮ್ಮ ಅನುದಾನದಲ್ಲಿ ಹೊಸ ಕೊಳವೆಬಾವಿ ಕೊರೆಯಿಸಿದ್ದಾರೆ. ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಗುವುದು ಎಂದರು.
ಮುಖಂಡರಾದ ಪರಮೇಶ್, ಚಂದ್ರಪ್ಪ, ಹರೀಶ್,ಗ್ರಾ.ಪಂ. ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.