ADVERTISEMENT

ಬೇತಮಂಗಲ: ಬಗೆಹರಿದ ನೀರಿನ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 3:54 IST
Last Updated 16 ಜುಲೈ 2021, 3:54 IST
ಬೇತಮಂಗಲ ಸಮೀಪದ ನಾಗಶೇಟ್ಟಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ಕೊರೆದ ಕೊಳವೆಬಾವಿಯಲ್ಲಿ ನೀರು ಲಭಿಸಿದೆ
ಬೇತಮಂಗಲ ಸಮೀಪದ ನಾಗಶೇಟ್ಟಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ಕೊರೆದ ಕೊಳವೆಬಾವಿಯಲ್ಲಿ ನೀರು ಲಭಿಸಿದೆ   

ಬೇತಮಂಗಲ: ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ ಅವರ ಅನುದಾನದಲ್ಲಿ ಕೊರೆಯಿಸಿದ ಕೊಳವೆಬಾವಿಯಲ್ಲಿ ಉತ್ತಮ ನೀರು ಸಿಕ್ಕಿದ್ದು, ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಎಂದು ಗ್ರಾ.ಪಂ. ಸದಸ್ಯ ನಾಗರಾಜ್ ಹೇಳಿದರು.

ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾ.ಪಂ. ವ್ಯಾಪ್ತಿಯ ನಾಗಶೇಟ್ಟಹಳ್ಳಿ ಗ್ರಾಮದಲ್ಲಿ ರೂಪಾ ಅವರು ತಮ್ಮ ಅನುದಾನದಲ್ಲಿ ಹೊಸ ಕೊಳವೆಬಾವಿ ಕೊರೆಯಿಸಿದ್ದಾರೆ. ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಗುವುದು ಎಂದರು.

ಮುಖಂಡರಾದ ಪರಮೇಶ್, ಚಂದ್ರಪ್ಪ, ಹರೀಶ್,ಗ್ರಾ.ಪಂ. ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.