ADVERTISEMENT

ಹೊಲಿಗೆ ಯಂತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 3:08 IST
Last Updated 3 ಸೆಪ್ಟೆಂಬರ್ 2021, 3:08 IST
ಕೋಲಾರದ ಡಿ. ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಅಭಿವೃದ್ಧಿ ಕುರಿತ ಚಿಂತನ- ಮಂಥನ ಸಂವಾದ ಕಾರ್ಯಕ್ರಮವನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್. ರಘು ಕೌಟಿಲ್ಯ ಉದ್ಘಾಟಿಸಿ ಮಾತನಾಡಿದರು
ಕೋಲಾರದ ಡಿ. ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಅಭಿವೃದ್ಧಿ ಕುರಿತ ಚಿಂತನ- ಮಂಥನ ಸಂವಾದ ಕಾರ್ಯಕ್ರಮವನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್. ರಘು ಕೌಟಿಲ್ಯ ಉದ್ಘಾಟಿಸಿ ಮಾತನಾಡಿದರು   

ಕೋಲಾರ: ‘ಕೊರೊನಾದಿಂದ ಜನರು ಸಂಕಷ್ಟ ಅನುಭವಿಸಿದ್ದಾರೆ. ಹಿಂದುಳಿದ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ವಿತರಿಸಲು ಪ್ರತಿ ಜಿಲ್ಲೆಗೆ ಒಂದು ಸಾವಿರ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು’ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ತಿಳಿಸಿದರು.

ನಗರದ ಡಿ. ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಅಭಿವೃದ್ಧಿ ಕುರಿತು ಚಿಂತನ- ಮಂಥನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ತಾಲ್ಲೂಕಿನ ಕನಿಷ್ಠ ನೂರು ಜನ ನಿರುದ್ಯೋಗಿಗಳಿಗೆ ನಿಗಮದಿಂದ ಕೌಶಲ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಲಾ ಗುವುದು. ಸಮಾಜದಲ್ಲಿ ಕಸುಬು ಆಧಾರಿತ ಸಮುದಾಯಗಳು ಮಹತ್ವದ ಪಾತ್ರ ನಿರ್ವಹಿಸುತ್ತಿವೆ ಎಂದರು.

ADVERTISEMENT

ಕೌಶಲ ತರಬೇತಿಯನ್ನು ನಿಗಮದ ಮೂಲಕ ನೀಡಲಾಗುವುದು. ದೇಶೀಯ ಉತ್ಪನ್ನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಿ 12ನೇ ಶತಮಾನದ ಬಸವಣ್ಣ ಅವರ ಕನಸು ನನಸು ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.