ADVERTISEMENT

ಕೊರೊನಾ ಸೋಂಕಿನ ನಾಗಾಲೋಟ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 12:25 IST
Last Updated 10 ಏಪ್ರಿಲ್ 2021, 12:25 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 118 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ.

ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ತ್ರಿಶತಕದ ಗಡಿ ದಾಟಿದೆ. ಸೋಂಕು ಹರಡುವಿಕೆ ಪ್ರಮಾಣ ಏಕಾಏಕಿ ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಜನರು ಕೋವಿಡ್‌ ಎರಡನೇ ಅಲೆ ಭೀತಿಗೆ ಆತಂಕಗೊಂಡಿದ್ದಾರೆ.

ಕೋಲಾರ ತಾಲ್ಲೂಕಿನ 53 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 17 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 16 ಮಂದಿಗೆ, ಮಾಲೂರು ತಾಲ್ಲೂಕಿನ 15 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 11 ಮಂದಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 49 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 24 ಮಂದಿ, ಬಂಗಾರಪೇಟೆ ತಾಲ್ಲೂಕಿನ 12, ಕೆಜಿಎಫ್‌ ತಾಲ್ಲೂಕಿನ 7 ಮತ್ತು ಮುಳಬಾಗಿಲು ತಾಲ್ಲೂಕಿನ 6 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.