ಮುಳಬಾಗಿಲು: ಮೋತಿ ಮಸೀದಿ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಅನುಕೂಲವಾಗುವಂತೆ ಶಾದಿ ಮಹಲ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಶ್ರಮಿಸಲಾಗುವುದು ಸಚಿವ ಎಚ್.ನಾಗೇಶ್ ಹೇಳಿದರು.
ನಗರದ ಮುತ್ಯಾಲಪೇಟೆ 4ನೇ ವಾರ್ಡ್ನ ಮೋತಿ ಮಸೀದಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.
ಈ ಬಾರಿ ನಗರಸಭೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರ ಆಯ್ಕೆ ಸಂತೋಷ ತಂದಿದೆ. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ನಗರಸಭೆ ಸದಸ್ಯರಾದವರಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಚತುರತೆ ಇರಬೇಕು. ಪ್ರತಿಯೊಬ್ಬ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿವಾರ್ಡ್ನ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅಧ್ಯಕ್ಷರು ಈ ನಿಟ್ಟಿನಲ್ಲಿ ಕೆಲಸ ಮಾಡಿದರೆ ನಗರಸಭೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಅಭಿವೃದ್ಧಿ ಹೊಂದುತ್ತದೆ ಎಂದು ಸಚಿವರು ಹೇಳಿದರು.
ವಾರ್ಡ್ ಸದಸ್ಯ ಚಾಂದ್ ಪಾಷಾ, ಪೌರಾಯುಕ್ತ ಜಿ.ಶ್ರೀನಿವಾಸಮೂರ್ತಿ, ತಾಲ್ಲೂಕು ದರಕಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ಗುತ್ತಿಗೆದಾರ ಅತ್ತಿಪಲ್ಲಿ ಶ್ರೀನಿವಾಸ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.